LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಸಡಗರ ಸಂಭ್ರಮದ ವಾಲ್ಮೀಕಿ ಜಯಂತ್ಯೋತ್ಸವ

ಯಲಹಂಕ: ಬಿಜೆಪಿ ಎಸ್ಟಿ ಮೋರ್ಚಾ ವತಿಯಿಂದ ಯಲಹಂಕ ಉಪನಗರದ ಬಿಜೆಪಿ ಕಚೇರಿಯಲ್ಲಿ ಸಮಾಜ ಸುಧಾರಕ, ಆದಿಕವಿ “ವಾಲ್ಮೀಕಿ ಜಯಂತಿ”ಯನ್ನು ಟಿ.ಟಿ.ಡಿ ಆಡಳಿತ ಮಂಡಳಿಯ ಸದಸ್ಯರು ಹಾಗೂ ಯಲಹಂಕ ಕ್ಷೇತ್ರದ ಜನಪ್ರಿಯ ಶಾಸಕರಾದ ಎಸ್. ಆರ್ ವಿಶ್ವನಾಥ್ ರವರ ಅಧ್ಯಕ್ಷತೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಆಚರಿಸಲಾಯಿತು.

ಜಯಂತಿ ಕಾರ್ಯಕ್ರಮದಲ್ಲಿ ಪ್ರಬುದ್ದ ಶಾಸಕರು, ಟಿಟಿಡಿ ಸದಸ್ಯರು, ಮಾಜಿ ಬಿಡಿಎ ಅಧ್ಯಕ್ಷರು ಆದ ಎಸ್ ಆರ್ ವಿಶ್ವನಾಥ್ ರವರು ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ನಗರ ಪಾಲಿಕೆ ಸದಸ್ಯರು,ನಗರ ಮಂಡಲ ಅಧ್ಯಕ್ಷರು ಆದ ಎಂ ಸತೀಶ್, ಎಸ್. ಟಿ ಆಗಮಿಸಿದ್ದರು.

ಮೋರ್ಚಾ ಅಧ್ಯಕ್ಷರಾದ ಬಿ.ಆರ್.ಮೋಹನ್, ಬಿಜೆಪಿ ಉತ್ತರ ಜಿಲ್ಲಾ ಎಸ್. ಟಿ ಮೋರ್ಚಾ ಉಪಾಧ್ಯಕ್ಷರಾದ ಎ.ಸಿ ಮುನಿಕೃಷ್ಣ ಅವರು ವೇದಿಕೆ ಹಂಚಿಕೊಂಡರು.ಅತಿಥಿಗಳಾಗಿ ಪವನ್ ಕುಮಾರ್, ರಾಜಣ್ಣ, ಮುನಿರಾಜು, ನಟರಾಜು, ಮಧುಸೂದನ್, ನಾರಾಯಣಸ್ವಾಮಿ, ಶೇಷಾದ್ರಿ ಇನ್ನೂ ಮುಂತಾದವರು ವೇದಿಕೆ ಅಲಂಕರಿಸಿದ್ದರು.

ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಸ್ವತಃ ಶಾಸಕರಾದ ಎಸ್ ಆರ್ ವಿಶ್ವನಾಥ್ ರವರೇ ಪೂಜೆ ಗೈದು ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶ್ರೀಯುತರನ್ನು ಮೋರ್ಚಾ ಪದಾಧಿಕಾರಿಗಳು ಸನ್ಮಾನಿಸಿ, ಗೌರವಿಸಿದರು. ನಂತರ ಸಭಿಕರನ್ನು ಉದ್ದೇಶಿಸಿ ಜನಪ್ರಿಯ ಶಾಸಕರು ಭರತ ಖಂಡದ, ಐತಿಹಾಸಿಕ ಮಹತ್ವ ಸಾರಿದ, ಉನ್ನತ ಜೀವನ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಪ್ರತಿಬಿಂಬಿಸುವ ‘ರಾಮಾಯಣ’ ಎಂಬ ಮಹಾಕಾವ್ಯ ರಚಿಸಿರುವ ಸಮಾಜ ಸುಧಾರಕ, ಆದಿಕವಿ “ ವಾಲ್ಮಿಕಿ” ಮಹರ್ಷಿಯ ಬಗ್ಗೆ ಸವಿವರವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಎಸ್ ಟಿ ಮೋರ್ಚಾ.ಪ್ರಧಾನ ಕಾರ್ಯದರ್ಶಿ: ಗಂಗಾಧರ್ ಪದಾಧಿಕಾರಿಗಳಾದ ಪ್ರದೀಪ್, ರಾಮಾಂಜಿ, ಹರೀಶ್, ಇತರ ಎಲ್ಲಾ ಪದಾಧಿಕಾರಿಗಳು, ಹಾಗೂ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು