LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ.ಬಂ.ದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ: ಸುಪ್ರೀಂ ಮಧ್ಯಪ್ರವೇಶಕ್ಕೆ ಮನವಿ

ಬೆಂಗಳೂರು: ಪಶ್ಚಿಮ ಬಂಗಾಳದ ಉತ್ತರ ಪರಗಣ ಜಿಲ್ಲೆಯ ಸಂದೇಶಖಾಲಿ ಹಳ್ಳಿಯ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಇದನ್ನು ಕರ್ನಾಟಕ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷರಾದ ಕು. ಸಿ. ಮಂಜುಳಾ ಖಂಡಿಸಿದ್ದು, ಅತ್ಯಾಚಾರ ಮತ್ತು ದೌರ್ಜನ್ಯ ಸೇರಿ ಸಮಗ್ರ ವಿಷಯದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾದ ಮಮತಾ ಬ್ಯಾನರ್ಜಿ ಮೊದಲಿನಿಂದಲೂ ಹಿಂದೂಗಳ ಮಾರಣಹೋಮ ನಡೆಸುವುದರಲ್ಲಿ ಚಿರಪರಿಚಿತ ನಾಯಕಿ. ಸಂದೇಶಖಾಲಿ ಹಳ್ಳಿಯಲ್ಲಿ ಕಳೆದ ಒಂದು ವಾರದಿಂದ ತಲ್ಲಣ ಸೃಷ್ಟಿಯಾಗಿದೆ. ಈ ಹಳ್ಳಿಯಲ್ಲಿ ಟಿಎಂಸಿ ಪಕ್ಷದ ಮುಸಲ್ಮಾನ ನಾಯಕ ಶೇಖ್ ಷಹಜಹಾನ್ ನ ಅನುಚರರು ಅವರ ಹಳ್ಳಿಗೆ ನುಗ್ಗಿ, ಮನೆಮನೆಯೊಳಗೆ ನುಗ್ಗಿ, ಯವ್ವನಾವಸ್ಥೆಯಲ್ಲಿರುವ, ಸುಂದರ, ಹಿಂದೂ ಮಹಿಳೆಯರನ್ನು ಎಳೆದುಕೊಂಡು ಹೋಗಿ ಅಲ್ಲಿನ ಟಿಎಂಸಿ ಪಕ್ಷದ ಕಚೇರಿಯಲ್ಲಿ ಅತ್ಯಾಚಾರವೆಸಗಿ ನಿರಂತರವಾಗಿ ಬಲಾತ್ಕಾರ ಮಾಡುತ್ತಿದ್ದಾರೆ ಎಂದು ವಿವರಿಸಿದ್ದಾರೆ.

ಯಾವ ಮಹಿಳೆ ಬಗ್ಗೆ ಅಂತಃಕರಣ ಇರಬೇಕೋ, ರಕ್ಷಣೆ ಕೊಡುವ ಜವಾಬ್ದಾರಿ ಇರುವಂತಹ ಒಬ್ಬ ಮುಖ್ಯಮಂತ್ರಿಯೇ ಮಹಿಳೆಯರ ಮೇಲಿನ ಅತ್ಯಾಚಾರವನ್ನು ನೊಡುತ್ತ, ಅತ್ಯಾಚಾರಿಗಳಿಗೆ ರಕ್ಷಣೆ ಕೊಡುತ್ತಿದ್ದಾರೆ ಎಂಬುದು ಅತ್ಯಂತ ಆತಂಕಕಾರಿ ವಿಚಾರ ಮತ್ತು ಖಂಡನಾರ್ಹ ಕೂಡ ಆಗಿದೆ ಎಂದು ಕು. ಸಿ. ಮಂಜುಳಾ ಅವರು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್, ಮಹಿಳಾ ರಕ್ಷಣೆಗಾಗಿ ತಕ್ಷಣವೇ ಮಧ್ಯ ಪ್ರವೇಶ ಮಾಡಬೇಕೆಂದು ಅವರು ವಿನಂತಿಸಿದ್ದಾರೆ.

ಅಲ್ಲಿನ ಮಹಿಳೆಯರಿಗೆ ನ್ಯಾಯ ಸಿಗಬೇಕು. ಟಿಎಂಸಿಯ ರೌಡಿ ಶೇಖ್ ಷಹಜಹಾನ್ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಅವನು ಆ ಹಿಂದೂ ಮಹಿಳೆಯರ ಕೃಷಿಭೂಮಿಯನ್ನು ಅನೈತಿಕವಾಗಿ ಕಸಿದುಕೊಂಡಿರುವುದನ್ನು ಈ ಕೂಡಲೇ ಹಿಂದಿರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶೇಖ್ ಷಹಜಹಾನ್, ಆ ಹಳ್ಳಿಯ ಹಿಂದೂ, ಪರಿಶಿಷ್ಟ ಜಾತಿ, ಪಂಗಡದ ಹಾಗೂ ಮೀನುಗಾರರ ದಲಿತ ಮಹಿಳೆಯರಿಗೆ ಸೇರಿದ ಕೃಷಿ ಭೂಮಿಯನ್ನು ಕಾನೂನು ಬಾಹಿರವಾಗಿ, ನಕಲಿ ದಾಖಲೆ ಸೃಷ್ಟಿಸಿ, ವಶದಲ್ಲಿ ಇಟ್ಟುಕೊಂಡಿದ್ದಾನೆ. ಇದೇ ಶೇಖ್ ಶಹಜಹಾನ್ ಜನವರಿ ತಿಂಗಳಲ್ಲಿ ಪಶ್ಚಿಮ ಬಂಗಾಳಕ್ಕೆ ಇ.ಡಿ. ಅಧಿಕಾರಿಗಳು ಭೇಟಿ ನೀಡಿದ ಸಂದರ್ಭದಲ್ಲಿ ಅವರ ಮೇಲೆ ದಾಳಿ ಮಾಡಿ ಕೊಲ್ಲಲು ಸಂಚು ರೂಪಿಸಿರುತ್ತಾನೆ. ಇದಾದ ನಂತರ ಅವನು ತಲೆಮರೆಸಿಕೊಂಡಿದ್ದಾನೆ. ಅವನಿಗೆ ರಕ್ಷಣೆ ನೀಡುತ್ತಿರುವುದು ಅಲ್ಲಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅವರ ಸರ್ಕಾರ ಎಂದು ಆಕ್ಷೇಪಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು