LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರೋಹಿತ್ ಶರ್ಮಾ ಜೊತೆ ಇಂದು ಆಡಲ್ಲ ವಿರಾಟ್ ಕೊಹ್ಲಿ..!

ಬಾರ್ಬಡೋಸ್: ಟಿ20 ವಿಶ್ವಕಪ್ ನಲ್ಲಿ ಕಳಪೆ ಫಾರ್ಮ್ ನಲ್ಲಿರುವ ವಿರಾಟ್ ಕೊಹ್ಲಿ ಇಂದು ಅಫರ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿಯುವುದು ಅನುಮಾನವಾಗಿದೆ.

ವಿರಾಟ್ ಕೊಹ್ಲಿ ಕಳೆದ ಮೂರೂ ಪಂದ್ಯಗಳಲ್ಲಿ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಕ್ರಮವಾಗಿ 1, 4 ಮತ್ತು ಶೂನ್ಯ ರನ್ ಗಳಿಸಿದ್ದರು. ಇದರಿಂದಾಗಿ ಅವರು ಸಾಕಷ್ಟು ಟೀಕೆಗೊಳಗಾಗಿದ್ದಾರೆ. ಅಲ್ಲದೆ ಅವರ ಬ್ಯಾಟಿಂಗ್ ಕ್ರಮಾಂಕ ಬದಲಾಯಿಸಲು ಒತ್ತಾಯ ಕೇಳಿಬರುತ್ತಿದೆ.
ಇದರಿಂದಾಗಿ ಈಗ ಕೊಹ್ಲಿ ಕೂಡಾ ಒತ್ತಡಕ್ಕೊಳಗಾಗಿದ್ದಾರೆ.

ಹೀಗಾಗಿ ಅವರು ಮೊನ್ನೆಯಿಂದ ನೆಟ್ಸ್ ನಲ್ಲಿ ಕೊಂಚ ಹೆಚ್ಚೇ ಬೆವರಿಳಿಸುತ್ತಿದ್ದರು. ವಿರಾಟ್ ಕೊಹ್ಲಿ ಸಾಮಾನ್ಯವಾಗಿ ಟೀಂ ಇಂಡಿಯಾ ಪರ ಮೂರನೇ ಕ್ರಮಾಂಕದಲ್ಲಿ ಆಡುತ್ತಾರೆ. ಆದರೆ ಟಿ20 ವಿಶ್ವಕಪ್ ಗೆ ದಿಡೀರ್ ಆಗಿ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಿದ ಯೋಜನೆ ಫಲಗೂಡಲಿಲ್ಲ.
ಇದರಿಂದಾಗಿ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಇಂದು ರೋಹಿತ್ ಜೊತೆಗೆ ಕೊಹ್ಲಿ ಬದಲು ರಿಷಬ್ ಪಂತ್ ರನ್ನು ಆರಂಭಿಕರಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಹಾಗಿದ್ದಲ್ಲಿ ಕೊಹ್ಲಿ ಎಂದಿನಂತೆ ತಮ್ಮ ಮೆಚ್ಚಿನ ಮೂರನೇ ಕ್ರಮಾಂಕದಲ್ಲಿ ಆಡಬಹುದಾಗಿದೆ. ಆದರೆ ಆಡುವ ಬಳಗದಲ್ಲಿ ಇಂದು ಬೇರೆ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು