LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮತಕೊಟ್ಟವರ ಮರೆಯಲಾಗದು

ಮಂಗಳೂರು: ನನ್ನ ತಮ್ಮನಿಗೆ ಚುನಾವಣೆ ಯಲ್ಲಿ ಆಸಕ್ತಿ ಇಲ್ಲ. ಜನ ನಮಗೆ ವಿಶ್ರಾಂತಿ ನೀಡಲು ಹೇಳಿದ್ದಾರೆ. ಆದರೆ, ಪಕ್ಷದ ಕೆಲಸ ಮಾಡಬೇಕೆಂಬ ಆಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವ ಸಲುವಾಗಿ ಮಂಗಳೂರಿಗೆ ಆಗಮಿಸಿದ ಅವರು, ಮಾಧ್ಯಮ ಪ್ರತಿನಿಧಿಗಳ ಬಳಿ ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.

ನಮಗೆ 85 ಸಾವಿರ ಜನ ಮತ ಕೊಟ್ಟಿದ್ದಾರೆ. ಎಂದಿಗೂ ಆ ಜನರನ್ನು ಬಿಡಲಾಗದು. ದೇವರು ನಮಗೆ ಈಗ ಅಧಿಕಾರ ಕೊಟ್ಟಿದ್ದಾರೆ. 136 ಸೀಟ್ ಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು. ಚನ್ನಪಟ್ಟಣ ಜನಕ್ಕೆ ಏನೂ ಆಗಿಲ್ಲ ಎಂಬ ಭಾವನೆ ಇದೆ. ನಾವು ಒಂದಷ್ಟು ಅಳಿಲು ಸೇವೆ ಮಾಡಬೇಕೆಂದು ಇದ್ದೇವೆ. ನಾವು ಅಧಿಕಾರ ಇದ್ದಾಗ ಮಾಡಿದ್ದೇವೆ. ಇದೀಗ ಸರಿಯಾದ ಸಮಯ.

ಏನೋ ಒಂದು ಸಹಾಯ ಮಾಡಬೇಕೆಂದು ಇದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.ಹೆಚ್.ಡಿ. ಕುಮಾರಸ್ವಾಮಿ ಚನ್ನಪಟ್ಟಣ ನೋಡುವ ಮೊದಲು ನಾನು ನೋಡಿದ್ದೇನೆ. ಕುಮಾರಸ್ವಾಮಿ ಬಹಳ ಲೇಟಾಗಿ ರಾಜಕಾರಣಕ್ಕೆ ಬಂದವರು. ನಾನು 1985ರಲ್ಲೇ ವಿಧಾನಸಭಾ ಚುನಾವಣೆಗೆ ನಿಂತೆ. ಅವರು 1995 ರ ನಂತರ ರಾಜಕಾರಣಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು ಎಂದು ಅವರು ಹೇಳಿದರು.

ಹೆಚ್ಚಿನ ಡಿಸಿಎಂ ಸ್ಥಾನಗಳಿಗೆ ಬೇಡಿಕೆ ಸೃಷ್ಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ನೀವು ಪ್ರತಿ ದಿನ ಸುದ್ದಿ ಪ್ರಕಟ ಮಾಡುತ್ತಿದ್ದೀರಲ್ಲ, ಇದರಿಂದ ಖುಷಿಯಾಗುವವರಿಗೆ ಆಗಲಿ. ಯಾರು ಏನು ಬೇಕಿದ್ದರೂ ಬೇಡಿಕೆ ಇಡಲಿ. ಪಕ್ಷ ಯಾರಿಗೆ ಏನು ಉತ್ತರ ಕೊಡಬೇಕೋ ಕೊಡುತ್ತದೆ ಎಂದರು.ಕುಮಾರಸ್ವಾಮಿ ಬಳ್ಳಾರಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿಗೆ ಎಷ್ಟು ಜ್ಞಾನ ಇದೆ ಅಥವಾ ಇಲ್ಲವಾ ಗೊತ್ತಿಲ್ಲ. ನನಗಂತು ಏನೂ ಗೊತ್ತಿಲ್ಲ ಎಂದರು.

ಏತನ್ಮಧ್ಯೆ, ಕುಕ್ಕೆ ಭೇಟಿ ಬಗ್ಗೆ ಮಾತನಾಡಿದ ಅವರು, ನಾವು ಹಿಂದೂ ಧರ್ಮದವರು. ನಮ್ಮ ರಾಜ್ಯದಲ್ಲಿ ಎಲ್ಲಾ ಧರ್ಮ, ಸಂಸ್ಕೃತಿಗಳನ್ನು ಜತೆಯಾಗಿ ತೆಗೆದುಕೊಂಡು ಹೋಗಲು ಧಾರ್ಮಿಕ ದತ್ತಿ ಇಲಾಖೆಯನ್ನು ಇಟ್ಟುಕೊಂಡಿದ್ದೇವೆ. ಅವರವರ ನಂಬಿಕೆ ಪ್ರಕಾರ ಅವರವರು ಪ್ರಾರ್ಥನೆ ಮಾಡುತ್ತಾರೆ. ಬಹಳ ದಿನಗಳಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗಬೇಕೆಂಬ ಆಸೆ ಇತ್ತು. ಇವತ್ತು ಕುಟುಂಬ ಸಮೇತ ಹೋಗುತ್ತಿದ್ದೇನೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು