LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಪೌರ ಕಾರ್ಮಿಕರಿಂದ ಮತದಾನ ಅರಿವು ಕಾರ್ಯಕ್ರಮ

ದೇವನಹಳ್ಳಿ: ಪಟ್ಟಣದ ಜನರಿಗೆ ಚುನಾವಣಾ ಕುರಿತು ಅರಿವು ಕಾರ್ಯಚಟುವಟಿಕೆಗಳ ಮತ್ತು ಸ್ವೀಪ್ ಕಾರ್ಯಕ್ರಮಗಳು ಮಾಡಿ ಮತದಾರರಲ್ಲಿ ಅರಿವು ಮೂಡಿಸಿ ಶೇ.ನೂರರಷ್ಟು ರಷ್ಟು ಪ್ರತಿಯೊಬ್ಬರೂ ಮತದಾನ ಮಾಡಿ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಪುರಸಭಾ ಮುಖ್ಯ ಆಡಳಿತ ಅಧಿಕಾರಿ ದೊಡ್ಡ ಮಲುವಯ್ಯ ಹೇಳಿದರು.

ದೇವನಹಳ್ಳಿ ತಾಲೂಕಿನ ಪುರಸಭಾ ಕಾರ್ಯಾಲಯದ ಪೌರ ಕಾರ್ಮಿಕರ ವತಿಯಿಂದ ‘ಚುನಾವಣಾ ಪರ್ವ ದೇಶದ ಗರ್ವ’ ಎಂಬ ತತ್ವದಡಿ ಜನರಲ್ಲಿ ಮತದಾನ ಕುರಿತು ಅರಿವು ಮೂಡಿಸಿದ್ದಾರೆ, ಪಟ್ಟಣದ ಬೀದಿಗಳಲ್ಲಿ ಸಂಚರಿಸಿ ಮತದಾನದ ಅರಿವು ಮೂಡಿಸಿದರು.ಜಿಲ್ಲಾಡಳಿತ, ಜಿಪಂ ಮತ್ತು ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಆಡಳಿತ, ತಾಲ್ಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ ಸಾರ್ವಜನಿಕರಿಗೆ ಮತದಾನ ಕುರಿತು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮತದಾನ ವನ್ನು ಪ್ರತಿಯೊಬ್ಬ ಸಾರ್ವಜನಿಕನ ಹಕ್ಕಾಗಿದ್ದು ಚಾಚೂ ತಪ್ಪದೇ ಮತದಾನ ಮಾಡಿ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂಕೊಡುಗೆ ನೀಡಬೇಕು. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮತದಾನದ ಅರಿವನ್ನು ಜಾಗೃತಿಯನ್ನು ಮೂಡಿಸು ತ್ತಿದ್ದೇವೆ. ಚುನಾವಣೆಗೆ ಸಂಬಂಧಿಸಿದ ನಾಯಕರ , ಪಕ್ಷದ ಚಿನ್ಹೆಗಳ ಬ್ಯಾನರ್ ಮತ್ತು ಬಿತ್ತಿಪತ್ರಗಳನ್ನು ಮರೆಮಾಚಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಬೇರೆ ಎಲ್ಲಾದರೂ ಕಂಡುಬಂದಲ್ಲಿ ತಿಳಿಸಿದರೆ ಅಧಿಕಾರಿಗಳು ಅದನ್ನು ತೆರವುಗೊಳಿಸುವ ಕೆಲಸ ಮಾಡಿತ್ತಾರೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ದೇವನಹಳ್ಳಿ ತಾಲೂಕು ಐಇಸಿ ಪ್ರಕಾಶ್, ಪುರಸಭಾ ಪೌರಕಾರ್ಮಿಕರು, ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು