LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಮತದಾನ ಜಾಗೃತಿ, ತಾಲ್ಲೂಕು ಆಡಳಿತದಿಂದ ಬೈಕ್ ಜಾಗೃತಿ ಜಾಥಾಗೆ ಚಾಲನೆ

ಹೊಸಕೋಟೆ: ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ 18 ವರ್ಷ ಮೇಲ್ಪಟ್ಟ ದೇಶದ ಪ್ರತಿಯೊಬ್ಬರೂ ಮತದಾನ ಮಾಡಬೇಕೆನ್ನುವ ಕಾರಣದಿಂದ ಈ ಮತದಾನ ಜಾಗೃತಿ ಜಾಥವನ್ನು ಏರ್ಪಡಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ಕಿಶನ್ ಕಲಾಲ್ ಹೇಳಿದರು.

ಅವರು ನಗರದ ಮಿನಿ ವಿಧಾನಸೌಧದ ಆವರಣದಲ್ಲಿ ಏರ್ಪಡಿಸಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.ನಗರದ ಪ್ರಮುಖ ಬೀದಿಗಳಲ್ಲಿ ರ್ಯಾಲಿ ನಡೆಯಲಿದ್ದು ಸಾರ್ವಜನಿಕರು ನಿರ್ಭೀತಿಯಿಂದ, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಸ್ವಂತ ವಿವೇಚನೆಯಿಂದ ಮತದಾನ ಪ್ರಕ್ರಿಯೆಯಲ್ಲಿ ಭಾಗ
ವಹಿಸಬೇಕೆಂಬ ಸಂದೇಶವನ್ನು ಸಾರಲಾಯಿತು.

ಇದೇ ರೀತಿ ತಾಲೂಕಿನ ಹೋಬಳಿ ಕೇಂದ್ರಗಳಲ್ಲೂ ಸಹ ಸರಕಾರೇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ತಿಳಿಸಿದರು.ತಹಶೀಲ್ದಾರ್ ಎಂ. ವಿಜಯಕುಮಾರ್ ಮಾತನಾಡಿ ಪ್ರಜಾಪ್ರಭುತ್ವದ ಅತ್ಯಂತ ಸುಂದರ ಕಲ್ಪನೆಯು ಮತದಾನ ಪ್ರಕ್ರಿಯೆಯು ಪ್ರಜಾಪ್ರಭುತ್ವದ ಅತ್ಯಂತ ಸುಂದರ ಕಲ್ಪನೆಯಾಗಿದ್ದು ನಮ್ಮ ಹಕ್ಕುಗಳನ್ನು ಕಾಪಾಡಬೇಕಾದ ಸೂಕ್ತ ಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು.

ಸಂವಿಧಾನದಲ್ಲಿ ನೀಡಿರುವ ಹಕ್ಕುಗಳನ್ನು ಪಡೆಯಲು ನೀಡುವಷ್ಟೇ ಪ್ರಾಮುಖ್ಯತೆಯನ್ನು ಜವಾಬ್ದಾರಿಗಳ್ನು ನಿರ್ವಹಿಸಲು ನೀಡಬೇಕಾದ್ದು ಪ್ರತಿಯೊಬ್ಬರ ಕರ್ತವ್ಯವಾಗಿದೆ.ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತ ಜಹೀರ್ ಅಬ್ಬಾಸ್, ಚುನಾವಣಾ ಶಾಖೆಯ ಅಧಿಕಾರಿಲಕ್ಷ್ಮೀನಾರಾಯಣ್, ತಾಲೂಕು ಆಡಳಿತದ ಸಿಬ್ಬಂದಿಗಳಾದ ರಾಜುಗೌಡ, ಸಂತೋಶ್, ಅಂಬರೀಶ್, ಆಂಜಿನಮ್ಮ, ಆನಂದ್ ಇನ್ನಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು