ಬೆಂಗಳೂರು: ಸಚಿವ ಸ್ಥಾನ ಸಿಗದೆ ತೀವ್ರ ಅಸಮಾಧಾನಗೊಂಡು ತಮ್ಮ ಶಾಸಕತ್ವಕ್ಕೆ ರಾಜೀನಾಮೆ ನೀಡಿರುವ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯದಿರಲು ನಿರ್ಧರಿಸಿದ್ದಾರೆ. ಇಂದು ಬೆಳಿಗ್ಗೆ ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ತಾವು ಪಕ್ಷದಲ್ಲಿ ಹಿರಿಯ ಶಾಸಕರಾಗಿದ್ದು, ತಮಗೆ ನೀಡಿದ ಆಶ್ವಾಸನೆ ಭರವಸೆಗಳಲ್ಲಾ ಹುಸಿಯಾಗಿವೆ. ತಮಗೆ ತೀವ್ರ ನೋವಾಗಿದೆ. ಹಾಗಾಗಿ ತಾವು ಕೈಗೊಂಡಿರುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಪಕ್ಷದಿಂದ ತಾವು ಹಿಂದೆ ಸರಿಯಲು ನಿರ್ಧಾರ ಕೈಗೊಂಡಿದ್ದೇನೆ. ಆ ನಿರ್ಧಾರವನ್ನು ಮತ್ತೆ ಬದಲಾಯಿಸುವುದಿಲ್ಲ ಎಂದಿದ್ದಾರೆ. ವಿಜಯಪುರ ಜಿಲ್ಲೆಯವರಾದ ಅವರಿಗೆ ಮಹಾರಾಷ್ಟç ರಾಜಕಾರಣದ ನಂಟುಇದೆ.