LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಯೋಗ ಪಯಣ... ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಮಾತು

ನವದೆಹಲಿ: ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಶ್ರೀನಗರದಲ್ಲಿ ನಡೆದ ಅಂತಾ ರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡು ಮಾತನಾಡಿದರು, ಯೋಗದ ಪ್ರಯಾಣ ಮುಂದುವರೆ-
ಯುತ್ತಿದೆ, ಇಂದು ಜಗತ್ತಿನಲ್ಲಿ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿದೆ ಎಂದರು.ಕಳೆದ ವರ್ಷ 130ಕ್ಕೂ ಹೆಚ್ಚು ದೇಶಗಳು ಭಾಗವಹಿಸಿದ್ದ ಅಮೆರಿಕದ ಪ್ರಧಾನ ಕಚೇರಿಯಲ್ಲಿ ಯೋಗ ದಿನಾಚರಣೆ ಮುನ್ನಡೆಸಲು ನನಗೆ ಅವಕಾಶ ಸಿಕ್ಕಿತು.

ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು.ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ,ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು. ಪ್ರಪಂಚದ ಎಲ್ಲಾ ಹಿರಿಯ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ನನ್ನೊಂದಿಗೆ ಯೋಗದ ಬಗ್ಗೆ ಚರ್ಚಿಸುತ್ತಾರೆ. ಇದು ಪ್ರಪಂಚದ ಜನರ ದೈನಂದಿನ ಜೀವನದ ಭಾಗವಾಗುತ್ತಿದೆ.

ಸೌದಿ ಅರೇಬಿಯಾ ಇದನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಸೇರಿಸಿದೆ. ಜರ್ಮನಿಯಲ್ಲಿ 1.5 ಕೋಟಿ ಜನರು ಯೋಗಾಭ್ಯಾಸವನ್ನು ಅಳವಡಿಸಿಕೊಂಡಿದ್ದಾರೆ ಎಂದು ಹೇಳಿದರು.ಭಾರತದಲ್ಲಿ ಋಷಿಕೇಶ, ಕಾಶಿಯಿಂದ ಕೇರಳದವರೆಗೆ ಯೋಗ ಪ್ರವಾಸೋದ್ಯಮದ ಕ್ರೇಜ್ ಇದೆ. ಭಾರತದಲ್ಲಿ ಅಧಿಕೃತ ಯೋಗ ತರಬೇತಿ ಲಭ್ಯವಿದೆ. ಜನರು ತಮ್ಮ ಫಿಟ್‍ನೆಸ್‍ಗಾಗಿ ವೈಯಕ್ತಿಕ ಯೋಗ ತರಬೇತುದಾರರನ್ನು ನೇಮಿಸಿಕೊಳ್ಳುತ್ತಿದ್ದಾರೆ.

ಬೆಳಗ್ಗೆ 6.30ಕ್ಕೆ ಯೋಗ ಕಾರ್ಯಕ್ರಮ ಆರಂಭವಾಗಬೇಕಿತ್ತು, ಆದರೆ ಮಳೆಯಿಂದಾಗಿ ಕಾರ್ಯಕ್ರಮವು ತಡವಾಗಿ ಆರಂಭವಾಯಿತು. ಪ್ರಧಾನಿ 7 ಸಾವಿರ ಜನರ ಜತೆ ಯೋಗ ಮಾಡಬೇಕಿತ್ತು ಆದರೆ ಮಳೆಯಿಂದಾಗಿ ಕೇವಲ 50 ಜನರಿದ್ದ ಸಭಾಂಗಣದಲ್ಲಿ ಯೋಗ ಮಾಡುವಂತಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು