ಚಿಕ್ಕಮಗಳೂರು: ಡಿಕೆಶಿ ಜಾತಕದಲ್ಲಿ ರಾಜಲಕ್ಷಿ÷್ಮ ಯೋಗ ಇದೆ. ನವೆಂಬರ್ ೨೬ರ ಬಳಿಕ ಡಿ.ಕೆ ಶಿವಕುಮಾರ್ ಸಿಎಂ ಆಗೋದನ್ನ ಯಾರೂ ತಡೆಯೋಕಾಗಲ್ಲ ಎಂದು ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ನುಡಿದಿದ್ದಾರೆ.
ರಾಜ್ಯ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ಬಿರುಗಾಳಿ ಜೋರಾಗುತ್ತಿದೆ. ಈಚೆಗೆ ಡಿಕೆಶಿ ಮುಂದಿನ ಸಿಎಂ ಆಗಬೇಕೆಂದು ಬಿಹಾರಿ ಮತದಾರರಿಂದ ಕೂಗು ಕೇಳಿಬಂದ ಬೆನ್ನಲ್ಲೇ ಸಿಎಂ ಗರಂ ಆಗಿದ್ದರು. ಇಷ್ಟುದಿನ ತಾಳ್ಮೆಯಿಂದ.. ನಗುನಗುತ್ತಲೇ ಉತ್ತರಿಸುತ್ತಿದ್ದ ಸಿಎಂ ಹೈಕಮಾಂಡ್ ಹೇಳಿದ್ದಷ್ಟೇ ಫೈನಲ್ ಅಂತ ಗುಡುಗಿದ್ದರು. ಇದರ ಬೆನ್ನಲ್ಲೇ ಸ್ವಾಮೀಜಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮಾಧ್ಯಮದ ಜೊತೆಗೆ ಮಾತನಾಡಿರುವ ಅವರು, ನವೆಂಬರ್ ೨೬ರ ಬಳಿಕ ಡಿಕೆಶಿ ಸಿಎಂ ಆಗೋದ್ನ ಯಾರೂ ತಡೆಯಲಾಗದು. ಡಿಕೆಶಿ ಸಿಎಂ ಆದ್ರೂ ಕೇವಲ ಒಂದೂವರೆ ವರ್ಷ ಅಷ್ಟೇ ಅಧಿಕಾರ ಮಾಡೋದು ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರಿಗೆ ಸಿಎಂ ಯೋಗ ಇದೆ, ಆಗೇ ಆಗುತ್ತಾರೆ. ೨೦೩೧ರ ವರೆಗೆ ರಾಜನಂತೆ ಇರ್ತಾರೆ. ಏಕೆಂದರೆ ಡಿಕೆಶಿ ಜಾತಕದಲ್ಲಿ ರಾಜಲಕ್ಷಿ÷್ಮ ಯೋಗ ಇದೆ. ಈ ಯೋಗ ಎಲ್ಲರಿಗೂ ಇರಲ್ಲ, ಅವರ ಜಾತಕದಲ್ಲಿ ಇದೆ. ಹಾಗಾಗಿ ಸಿಎಂ ಆಗೇ ಆಗುತ್ತಾರೆ. ಒಂದೂವರೆ ವರ್ಷದ ಹಿಂದೆಯೇ ಅವರಿಗೆ ಹೇಳಿ ಮಂತ್ರಾಕ್ಷತೆ ಕೊಟ್ಟಿದ್ದೇನೆ. ಅವರಿಗೆ ಮುಖ್ಯಮಂತ್ರಿ ಯೋಗ ಇದೆ, ಅದನ್ನ ಯಾರೂ ತಪ್ಪಿಸಲು ಆಗಲ್ಲ ಎಂದು ಭವಿಷ್ಯ ನುಡಿದಿದ್ದಾರೆ.


		
		
		
		