ಬೆಂಗಳೂರು: ಭೀಕರ ಸಿಲಿಂಡರ್ ಸ್ಫೋಟಕ್ಕೆ ಬೃಹತ್ ಕಟ್ಟಡವೇ ನೆಲಸಮಗೊಂಡಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂನ ತ್ರಿವೇಣಿ ನಗರದಲ್ಲಿ ನಡೆದಿದೆ. ಬೆಳಗ್ಗೆ ೭ ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಭಾರೀ ಕಟ್ಟಡವೇ ನೆಲಸಮ ಆಗಿದೆ. ಅಕ್ಕಪಕ್ಕದ ಮನೆಗಳ ಕಿಟಕಿಗಳು ಹಾನಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಕೆ.ಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಾಂಬ್ ಸ್ಕಾ÷್ವಡ್ ಹಾಗೂ ಡಾಗ್ ಸ್ಕಾ÷್ವಡ್ ಅಧಿಕಾರಿಗಳಿಂದಲೂ ಸ್ಥಳ ಪರಿಶೀಲನೆ ನಡೆಯುತ್ತಿದೆ. ಸ್ಫೋಟಕ್ಕೆ ಕಾರಣ ಏನೆಂಬುದು ತಿಳಿದುಬಂದಿಲ್ಲ.



