ನಂಜನಗೂಡು: ಟ್ರಾಫಿಕ್ ಪೊಲೀಸ್ ಠಾಣೆ ಮುಂಭಾಗವೇಪೊಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾತ್ರಿ ನಡೆದಿದೆ.
ನಂಜನಗೂಡು ತಾಲ್ಲೂಕು ಮುದ್ದಳ್ಳಿ ಗ್ರಾಮದ ಅಭಿ(25) ಮೃತಪಟ್ಟ ಯುವಕ.
ಈತ ನಂಜನಗೂಡಿನಿಂದ ಗುಂಡ್ಲುಪೇಟೆ- ಊಟಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುದ್ದಳ್ಳಿ ಗ್ರಾಮಕ್ಕೆ ತನ್ನ ಪಲ್ಸರ್ ಬೈಕ್ ಏಂ-09 ಊಒ2984 ರಲ್ಲಿ ತೆರಳುವ ವೇಳೆ ನಂಜನಗೂಡು ಟ್ರಾಫಿಕ್ ಪೊಲೀಸ್ ಠಾಣೆ ಒಳಗಿನಿಂದ ಬಂದ ಪೊಲೀಸ್ ಜೀಪ್ ಡಿಕ್ಕಿ ಹೊಡೆದಿದೆ. ಇದರಿಂದ ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಪೊಲೀಸ್ ಜೀಪ್ ಚಾಲಕನ ಅಜಾಗರೂಕತೆಯಿಂದ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಈ ಸ್ಥಳದಲ್ಲಿ ಕೆ.ಎಚ್.ಬಿ ಕಾಲೋನಿಗೆ ತಿರುಗುವ ಮಾರ್ಗ ಇದ್ದು, ಸಾಕಷ್ಟು ಅವಘಡಗಳು ಉಂಟಾಗಿದೆ. ಈ ಜಾಗದಲ್ಲಿ ಬ್ಯಾರಿಕೇಡ್ ಅಥವಾ ಇನ್ನಿತರೆ ಕ್ರಮಗಳನ್ನು ಪೊಲೀಸರು ಕೈಗೊಳ್ಳದಿರುವುದೆ ಅಪಘಾತಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Leave a Review