ಬೆಂಗಳೂರು: ಸಚಿವ ಪ್ರಿಯಾಂಕ್ಖರ್ಗೆಗೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರುಕರೆ ಮಾಡಿದ್ದ ವ್ಯಕ್ತಿಯ ಮೂಲ ಪತ್ತೆ ಹಚ್ಚಿದ್ದು, ಬಂಧಿಸಲು ಮುಂದಾಗಿದ್ದಾರೆ. ಈ ಬೆದರಿಕೆ ಕರೆಗಳ ಕುರಿತಂತೆ ಬೆಂಗಳೂರಿನ ಸದಾಶಿವನಗರ ಪೊಲೀಸ್ಠಾಣೆಯಲ್ಲಿ ಪೊಲೀಸರುಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕರೆ ಮಾಡಿದ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪುರ ಮೂಲದ ದಾನೇಶ್ ನರೋಣ ಎಂದು ತಿಳಿದುಬಂದಿದೆ.
ಆರ್ಎಸ್ಎಸ್ ಬಗ್ಗೆ ಮಾತನಾಡಿದ್ದಕ್ಕೆ ವ್ಯಕ್ತಿಯೋರ್ವ ಪ್ರಿಯಾಂಕ್ಖರ್ಗೆಗೆಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇಅವಾಚ್ಯ ಪದಗಳಿಂದ ನಿಂದಿಸಿದ್ದ.ಈ ಕುರಿತು ಸಚಿವ ಪ್ರಿಯಾಂಕ್ಖರ್ಗೆದೂರು ನೀಡಲು ಹಿಂದೇಟು ಹಾಕಿದ್ದರು.ಈ ಹಿನ್ನೆಲೆಕಾಂಗ್ರೆಸ್ ಮುಖಂಡ ಮನೋಹರ್ ಸದಾಶಿವನಗರ ಪೊಲೀಸ್ಠಾಣೆಯಲ್ಲಿದೂರು ನೀಡಿದ್ದರು.ದೂರಿನನ್ವಯಎಫ್ಐಆರ್ ದಾಖಲಿಸಿಕೊಂಡ ಪೊಲೀಸರು ತನಿಖೆಗಿಳಿದು ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.ಸದ್ಯ ಬೆಂಗಳೂರು ಪೊಲೀಸರು ಬೆದರಿಕೆಕರೆ ಮಾಡಿದ ವ್ಯಕ್ತಿಯಜಾಡು ಹಿಡಿದು ಹೊರಟಿದ್ದು, ಆರೋಪಿಯನ್ನು ಬಂಧಿಸಲು ಮುಂದಾಗಿದ್ದಾರೆ.