ಮಾಸ್ಕೋ: ರಷ್ಯಾದ ಕಚ್ಚಾ ತೈಲ ವ್ಯಾಪಾರವನ್ನು ನಿಲ್ಲಿಸುವಂತೆ ಭಾರತದ ಮೇಲೆ ಒತ್ತಡ ಹೇರಲು ಅಮೆರಿಕ ಪ್ರಯತ್ನಿಸುತ್ತಿರುವುದನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಟೀಕಿಸಿದ್ದಾರೆ. ಭಾರತ ಎಂದಿಗೂ ಅಂತಹ ಬೇಡಿಕೆಗಳಿಗೆ ಮಣಿಯುವುದಿಲ್ಲ. ಯಾರ ಮುಂದೆಯೂ ಅವಮಾನಕ್ಕೊಳಗಾಗಲು ರಷ್ಯಾ ಬಿಡುವುದಿಲ್ಲ ಎಂದು ಪುಟಿನ್ ಹೇಳಿದ್ದಾರೆ. ಸೋಚಿಯಲ್ಲಿ ನಡೆದ ವಾಲ್ಡೆöÊ ಚರ್ಚಾ ಕ್ಲಬ್ನ ಸಮಗ್ರ ಅಧಿವೇಶನದಲ್ಲಿ ಮಾತನಾಡಿದ ರಷ್ಯಾದ ಅಧ್ಯಕ್ಷ, ಪ್ರಧಾನಿ ನರೇಂದ್ರ ಮೋದಿಯವರನ್ನು ಸಮತೋಲಿತ ಮತ್ತು ಬುದ್ಧಿವಂತ ನಾಯಕ ಎಂದು ಬಣ್ಣಿಸಿದ್ದಾರೆ.
ಭಾರತವು ರಷ್ಯಾದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವುದು ಆರ್ಥಿಕ ಲೆಕ್ಕಾಚಾರ ಅಷ್ಟೆ. ಇಲ್ಲಿ ಯಾವುದೇ ರಾಜಕೀಯ ಅಂಶವಿಲ್ಲ. ಭಾರತ ನಮ್ಮ ಇಂಧನ ಪೂರೈಕೆಗಳನ್ನು ನಿರಾಕರಿಸಿದರೆ, ಅದು ಕೆಲವು ನಷ್ಟಗಳನ್ನು ಅನುಭವಿಸುತ್ತದೆ. ಅಂದಾಜುಗಳು ಬದಲಾಗುತ್ತವೆ ಎಂದು ಸ್ಪಷ್ಟಪಡಿಸಿದ್ದಾರೆ.
ಭಾರತದAತಹ ದೇಶದ ಜನರು ನನ್ನನ್ನು ನಂಬಿರಿ. ರಾಜಕೀಯ ನಾಯಕತ್ವವು ತೆಗೆದುಕೊಳ್ಳುವ ನಿರ್ಧಾರಗಳನ್ನು ಸೂಕ್ಷ÷್ಮವಾಗಿ ಗಮನಿಸುತ್ತಾರೆ. ಯಾರ
ಮುಂದೆಯೂ ಯಾವುದೇ ಅವಮಾನವನ್ನು ಎಂದಿಗೂ ಸಹಿಸಲ್ಲ. ನನಗೆ ಪ್ರಧಾನಿ ಮೋದಿ ಗೊತ್ತು. ಅವರು ಸ್ವತಃ ಈ ರೀತಿಯ ಯಾವುದೇಕ್ರಮಗಳನ್ನು ಎಂದಿಗೂ ತೆಗೆದುಕೊಳ್ಳುವುದಿಲ್ಲ. ಅಮೆರಿಕದ ದಂಡನಾತ್ಮಕ ಸುಂಕಗಳಿAದಾಗಿ ಭಾರತ ಎದುರಿಸುತ್ತಿರುವ ನಷ್ಟಗಳನ್ನು ರಷ್ಯಾದಿಂದ ಕಚ್ಚಾ ತೈಲ ಆಮದುಗಳಿಂದ ಸಮತೋಲನಗೊಳಿಸಲಾಗುತ್ತದೆ. ಜೊತೆಗೆ ಅದು ಸಾರ್ವಭೌಮ ರಾಷ್ಟçವಾಗಿ ಪ್ರತಿಷ್ಠೆಯನ್ನು ಪಡೆಯುತ್ತದೆ ಎಂದು ಪುಟಿನ್ ತಿಳಿಸಿದ್ದಾರೆ.