ಮಳವಳ್ಳಿ: ಪಟ್ಟಣದ ಎ ಸರ್ಕಲ್ನಲ್ಲಿ ಇಂದು ಬೆಳಿಗ್ಗೆ 7. 15 ರ ಸಮಯದಲ್ಲಿ ಬೆಂಗಳೂರಿನಿಂದ ಬಂದ ಖಾಸಗಿ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಶಿಕ್ಷಕರಾದ ಈರಯ್ಯ ರವರು ಕೆಳಗೆ ಬಿದ್ದಿದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.
ನಿವೃತ್ತ ಶಿಕ್ಷಕರಾದ ಈರಯ್ಯ ರವರು ಪೇಟೆ ಬೀದಿ ನಿವಾಸಿಯಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದ್ದು ಪಟ್ಟಣದ ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರು ಪತ್ನಿ ಹಾಗೂ ಇಬ್ಬರು ಪುತ್ರರು, ಇಬ್ಬರು ಪುತ್ರಿಯರನ್ನು ಸೇರಿದಂತೆ ಅಪಾರ ಬಂಧುಬಳಗ, ಹಿತೈಷಿ ಅಭಿಮಾನಿಗಳನ್ನು ಅಗಲಿದ್ದಾರೆ.