ಬೆಂಗಳೂರು : ಅಸ್ಸಾಂ ರಾಜ್ಯದ ಸಂತೋಷ್ ಶರ್ಮ ದ್ವಿಚಕ್ರ ವಾಹನದಲ್ಲಿ ಕಮನಹಳ್ಳಿಯ ಹೋಟೆಲ್ ಒಂದರಲ್ಲಿ ಕೆಲಸ ಮುಗಿಸಿಕೊಂಡು ಹೋಗುವಾಗ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುತ್ತಾನೆ.
ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಗಿಲು ಸರ್ಕಲ್ ಸಿಗ್ನಲ್ ಬಳಿ ನಿನ್ನೆ ರಾತ್ರಿ 9:30 ಸುಮಾರಿಗೆ ಸಂತೋಷ್ ಶರ್ಮ ಮೃತಪಟ್ಟಿರುತ್ತಾನೆ, ಯಲಹಂಕ ಸಂಚಾರಿ ಪೊಲೀಸರು ಕಾರ್ ಚಾಲಕನನ್ನು ಬಂಧಿಸಿ ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುತ್ತಾರೆ.



