ಮುAಬೈ: ಏಷ್ಯಾ ಕಪ್ ಟ್ರೋಫಿಯನ್ನ ಭಾರತಕ್ಕೆ ಹಸ್ತಾಂತರಿಸುವAತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ
ಹಾಗೂ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿಗೆ ಅಧಿಕೃತವಾಗಿ ಇ-ಮೇಲ್ ಪತ್ರ ಬರೆದಿದೆ. ಕಳೆದ ಸೆಪ್ಟೆಂಬರ್ ೨೮ರAದು ನಡೆದ ಟಿ೨೦
ಏಷ್ಯಾಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ, ಪಾಕ್ ವಿರುದ್ಧ ೫ ವಿಕೆಟ್ಗಳ ಜಯ ಸಾಧಿಸಿತು. ಆದ್ರೆ ನಖ್ವಿ ಅವರಿಂದ ಟ್ರೋಫಿ ಪಡೆಯಲು ಟೀಂ ಇಂಡಿಯಾ ನಿರಾಕರಿಸಿತು. ಹೀಗಾಗಿ ನಖ್ವಿ ದುಬೈ ಅಂತಾರಾಷ್ಟಿçÃಯ ಕ್ರಿಕೆಟ್ ಮೈದಾನದಿಂದ ಹೊರಟರು ಜೊತೆಗೆ ಟ್ರೋಫಿಯನ್ನ ತೆಗೆದುಕೊಂಡು ಹೋದರು.
ಹೀಗಾಗಿ ಭಾರತ ತಂಡ ಗೆದ್ದಿರುವ ಟ್ರೋಫಿಯನ್ನ ಹಿಂದಿರುಗಿಸುವAತೆ ಹೇಳಿದೆ.
ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ಬಿಸಿಸಿಐ ನಖ್ವಿ ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದೆ. ಅವರ ಕಡೆಯಿಂದ ಯಾವುದೇ ಉತ್ತರ ಬರದಿದ್ದರೆ, ಐಸಿಸಿಗೆ ದೂರು ನೀಡುವುದಾಗಿ ಎಚ್ಚರಿಸಿದೆ. ಸದ್ಯ ಭಾರತ ಗೆದ್ದಿರುವ ಏಷ್ಯಾಕಪ್ ಟ್ರೋಫಿ ದುಬೈನ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಕಚೇರಿಯಲ್ಲೇ ಇದೆ. ತಮ್ಮ ಅನುಮತಿಯಿಲ್ಲದೇ ಯಾರೋ ಟ್ರೋಫಿಯನ್ನ ಹಸ್ತಾಂತರಿಸಬಾರದು ಎAದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ
ಎನ್ನಲಾಗಿದೆ.
ನಖ್ವಿಯವರ ಆಪ್ತ ಮೂಲದ ಪ್ರಕಾರ, ಟ್ರೋಫಿ ದುಬೈನ ಎಸಿಸಿ ಕಚೇರಿಯಲ್ಲಿದೆ. ತನ್ನ ಅನುಮತಿಯಿಲ್ಲದೇ ಯಾರಿಗೂ ಟ್ರೋಫಿ ಹಸ್ತಾಂತರಿಸಬಾರದು. ಒಂದು ವೇಳೆ ಹಸ್ತಾಂತರಿಸಬೇಕಿದ್ರೆ, ನಾನೇ ಭಾರತ ತಂಡ ಅಥವಾ ಬಿಸಿಸಿಐಗೆ ವೈಯಕ್ತಿಕವಾಗಿ ಟ್ರೋಫಿ ಹಸ್ತಾಂತರಿಸೋದಾಗಿ ಹೇಳಿದ್ದಾರೆ.



