ದಾವಣಗೆರೆ: ಸರ್ವಜ್ಞ ಕವಿಯು ತಮ್ಮ ತ್ರಿಪದಿಗಳ ಮೂಲಕ ಜೀವನದ ಅನುಭವ ಕಲಿಸಿಕೊಟ್ಟು, ಬದುಕಿನ ಅರಿವು ಮೂಡಿಸುವ ಪ್ರಯತ್ನ ಮಾಡಿದವರು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎA ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ನಡೆದ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸರ್ವಜ್ಞನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ವಚನ ಸಾಹಿತ್ಯ, ಹಳೇಗನ್ನಾಡ, ಹೊಸಗನ್ನಾಡವನ್ನು ಶಾಲಾ ಮಕ್ಕಳಿಗೆ ಹಾಗೂ ಹಾಸ್ಟೆಲ್ ಮಕ್ಕಳಿಗೂ ತಿಳಿಯುವಂತೆ ನಾವು ಮಾಡಿದ್ದೇವೆ. ಸರ್ವಜ್ಞ ಎಂದರೆ ಎಲ್ಲವನ್ನು ತಿಳಿದವನು, ಸಮಾಜದ ಜ್ಞಾನವನ್ನು ಅರಿತವನು, ಸರ್ವಜ್ಞ ಕವಿಯು, ವಿದ್ಯೆ, ಕೃಷಿ ಹಾಗೂ ಜೀವನದ ಕುರಿತ ಆಳವನ್ನು ಅಳೆಯುವುದರ ಮೂಲಕ ದೊಡ್ಡ ವ್ಯಕ್ತಿತ್ವವನ್ನು ಹೊಂದಿದ್ದರು. ಅವರ ತ್ರಿಪದಿಗಳಲ್ಲಿ ಒಳ ಅರಿವು ಜಾಸ್ತಿ ಇದ್ದು, ಶ್ರೀಸಾಮಾನ್ಯರಿಗೂ ಅರ್ಥವಾಗುವಂತಿರುತ್ತದೆ. ಸರ್ವಜ್ಞರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡು ಮುಂದಿನ ಪೀಳಿಗೆಗೆ ತಲುಪಿಸು ವಂಥ ಕೆಲಸವನ್ನು ಮಾಡಬೇಕು ಎಂದರು.
ಕುಂಬಾರ ಸಮಾಜದವರು ನೀಡಿದ ಮನ ವಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಯವರು ನಿಮ್ಮ ಬೇಡಿಕೆಯಂತೆ ನಿಮಗೆ ಬೇಕಾದ ಮಣ್ಣನ್ನು ನೀಡಲು ನಾವು ಸಹಕರಿಸುತ್ತೆವೆ ಎಂದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಯೋಜನಾ ನಿರ್ದೇಶಕರಾದ ಮಹಾಂತೇಶ್, ಜಿ.ಪಂ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಕುಂಬಾರ ಸಮಾಜದ ಅಧ್ಯಕ್ಷರಾದ ಪುಷ್ಪರಾಜ್, ಬುರುಡೆಕಟ್ಟೆ ಮಂಜಪ್ಪ, ಹಾಗೂ ಸಮಾಜ ಮುಖಂಡರು ಉಪಸ್ಥಿತರಿದ್ದರು.
`ಸರ್ವಜ್ಞನ ತ್ರಿಪದಿಗಳು ಜೀವನಾನುಭವ, ಬದುಕಿನ ಅರಿವು ಮೂಡಿಸಲಿವೆ’



