ಬೆಂಗಳೂರು: ಕನ್ನಡ ಸಂಘರ್ಷ ಸಮಿತಿಯ ಕಾರ್ಯಕಾರಿ ಸಮಿತಿಯು ೨೦೨೫ನೇ ಸಾಲಿಗೆ `ಕನ್ನಡ ಕಟ್ಟಾಳು’ ಪ್ರಶಸ್ತಿಗೆ ಕನ್ನಡ ಕಾರ್ಯಕರ್ತ ಶ್ರೀ ಬಿ.ಎಂ. ನಾರಾಯಣಸ್ವಾಮಿ ಹಾಗೂ `ನಿಸ್ಸೀಮ ಕನ್ನಡತಿ’ ಪ್ರಶಸ್ತಿಗೆ ಹಿರಿಯ ಕಲಾವಿದೆ ಹಾಗೂ ಲೇಖಕಿ ಶ್ರೀಮತಿ ಜಯಲಕ್ಷಿ÷್ಮ ಪಾಟೀಲ್ ಅವರನ್ನು ಆಯ್ಕೆ ಮಾಡಿರುತ್ತದೆ. ದಿನಾಂಕ ೩೧-೧೦-೨೦೨೫ರ ಶುಕ್ರವಾರ ಸಂಜೆ ೪.೩೦ ಗಂಟೆಗೆ ಬೆಂಗಳೂರಿನ ನರಸಿಂಹರಾಜ ಕಾಲೋನಿಯಲ್ಲಿರುವ ಬಿ.ಎಂ.ಶ್ರೀ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಕನ್ನಡ ಸಂಘರ್ಷ ಸಮಿತಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿಪ್ರದಾನ ಮಾಡಲಾಗುವುದು.
ಪ್ರಶಸ್ತಿಯು ಸ್ಮರಣಿಕೆ ಹಾಗೂ ತಲಾ ೧೧ ಸಾವಿರ ನಗದು ಪುರಸ್ಕಾರ ಹೊಂದಿರುತ್ತದೆ. ಕಾರ್ಯಕ್ರಮವನ್ನು ಪೂಜ್ಯಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಹಾಸ್ವಾಮಿಗಳು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸ್ಮರಣ ಸಂಚಿಕೆಯನ್ನು ಡಾ. ಸಂತೋಷ್ ಹಾನಗಲ್, ಕಾರ್ಯದರ್ಶಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅವರು ಬಿಡುಗಡೆ ಮಾಡಲಿದ್ದು, ಅಧ್ಯಕ್ಷತೆಯನ್ನು ರಾಮಣ್ಣ ಎಚ್ ಕೋಡಿಹೊಸಹಳ್ಳಿ ಅವರು ವಹಿಸಲಿದ್ದಾರೆ. ಕನ್ನಡ ಸಂಘರ್ಷ ಸಮಿತಿಯ ಅಧ್ಯಕ್ಷ ಮಎ.ಎಸ್.ನಾಗರಾಜಸ್ವಾಮಿ ಅವರು ಆಶಯ ಮಾತುಗಳನ್ನಾಡಲಿದ್ದಾರೆ.