Tag: ಕಾರ್ಯದರ್ಶಿ,

ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ರಾಯಲ್ ಡಾ. ಗುರುಮೂರ್ತಿ ರವರಿಗೆ ಸಾಮ್ರಾಟ್ ಸ್ಟಾರ್ ಅವಾರ್ಡ್ ಪ್ರಶಸ್ತಿ ಪ್ರದಾನ ಮೈಸೂರು: ಬೆಂಗಳೂರು ಜೆ.ಸಿ. ರಸ್ತೆ ರವೀಂದ್ರ ಕಲಾಕ್ಷೇತ್ರದಲ್ಲಿ, ಓಂ ಶ್ರೀ ಸಾಯಿರಾಂ ಸಾಂಸ್ಕöÈತಿಕ ಕಲಾ ವೇದಿಕೆಯ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮೈಸೂರು ಮಂಜುಳ(ಜೂ. ಮಾಲಾಶ್ರೀ) ಹಮ್ಮಿಕೊಂಡ ಕಾರ್ಯಕ್ರಮದಲ್ಲಿ, ಬೆಂಗಳೂರು ಇಟ್ಟಮಡುನಲ್ಲಿರುವ ಎಸ್.ಆರ್.ಟಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರಾಯಲ್ ಡಾ.ಗುರುಮೂರ್ತಿ ರವರು, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಅತಿ ಹೆಚ್ಚಿನ ಅಂಕಗಳನ್ನು ಪಡೆಯಲು ಉತ್ತಮ ಶಿಕ್ಷಣ ನೀಡುತ್ತಿರುವ ಹಾಗೂ ಸಾಮಾಜಿಕ ಸೇವೆಗಳನ್ನು ಮಾಡುತ್ತಿರುವ ಡಾ. ರಾಯಲ್ ಗುರುಮೂರ್ತಿ ರವರಿಗೆ ಸಾಮ್ರಾಟ್ ಸ್ಟಾರ್ ಅವಾರ್ಡ್ ಪ್ರಶಸ್ತಿಯನ್ನು, ಚಿತ್ರನಟ ಶಶಿಧರ್ ಕೋಟೆ ರವರು ನೀಡಿ ಗೌರವಿಸಿದರು, ಕಾರ್ಯಕ್ರಮದಲ್ಲಿ ಮೈಸೂರು ಲತಾ (ಜೂ. ರಕ್ಷಿತ) ಸೇರಿದಂತೆ ಅನೇಕ ಗಣ್ಯರಿದ್ದರು. ಚಿತ್ರ: ಜಿ.ಎಲ್.ಸಂಪAಗಿ ರಾಮುಲು

ರಾಷ್ಟಿçಯ ಪತ್ರಿಕಾ ದಿನಾಚರಣೆ ಅಂಗವಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಬದಲಾಗುತ್ತಿರುವ ಪತ್ರಿಕಾಮಾಧ್ಯಮದ ಸ್ವರೂಪ ಕುರಿತು ವಿಚಾರ ಸಂಕಿರಣಕ್ಕೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೋಯ್ಲಿ ಚಾಲನೆ ನೀಡಿದರು. ಅಜೀಂ ಪ್ರೇಮ್‌ಜೀ, ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಎ. ನಾರಾಯಣ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾಖಾನಂ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರ ಕಾರ್ಯದರ್ಶಿ ಬಿಬಿ ಕಾವೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಇಲಾಖೆ, ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಅವರು ಉಪಸ್ಥಿತರಿದ್ದರು. ಇಂದುಸಂಜೆ ಪತ್ರಿಕೆ ವ್ಯವಸ್ಥಾಪಕ ಸಂಪಾದಕರಾದ ಡಾ. ಜಿ.ವೈ. ಪದ್ಮನಾಗರಾಜು ಮತ್ತಿತರರು ನಾಡಗೀತೆ ಹಾಡುವ ಮೂಲಕ ಕಾರ್ಯಕ್ರಮದ ಶುಭಾರಂಭ ಮಾಡಿದರು.

ಬೆಂಗಳೂರು ಬಸವನಗುಡಿ ಎಂ.ಎನ್. ಕೃಷ್ಣರಾವ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡರು, ಇದೇ ಸಮಾರಂಭದಲ್ಲಿ ಅಸೋಸಿಯೇಷನ್ ಅಧ್ಯಕ್ಷರಾದ ನಾಗರಾಜ್ ರವರಿಗೆ ಸನ್ಮಾನಿಸಿದರು, ಇದೇ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಡಾ. ತ್ಯಾಗರಾಜ್ ರವರಿಗೆ, ಅಗ್ರಹಾರ ಬಿನ್ನಿ ಕ್ಯಾಂಟಿನ್ ಬಳಿ ಇರುವ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ಶಿವಾನಂದ ಹಿರೆಮಠ್ ರವರು ಸನ್ಮಾನಿಸಿದರು, ವಾಕರ್ಸ್ ಅಸೋಸಿಯೇಷನ್ ಪದಾಧಿಕಾರಿಗಳಾದ ನಾಗೇಂದ್ರ ಗುಪ್ತ, ಅಬ್ದುಲ್ ಕಲೀಮ್, ಜಯಲಕ್ಷಿ÷್ಮ, ಕೋಕಿಲ, ಮಲ್ಲಯ್ಯ ಶಿವಕುಮಾರ್, ರಾಮಚಂದ್ರ, ದೇವೇಗೌಡ, ಯೋಗನರಸಿಂಹ,ಜವರಯ್ಯ, ಮಂಜುನಾಥ್ ಸೇರಿದಂತೆ ಅನೇಕರಿದ್ದರು. ಚಿತ್ರ: ಜಿ. ಎಲ್. ಸಂಪAಗಿ ರಾಮುಲು

";