ಚಾಮರಾಜನಗರ: ದಿನ ನಿತ್ಯದ ದೈನಂದಿನ ಕೆಲಸಗಳನ್ನು ಸುಸೂತ್ರವಾಗಿ ನಿರ್ವಹಿಸಲು ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಸಹ ಮುಖ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ತಿಳಿಸಿದರು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದೊಂದಿಗೆ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮನುಷ್ಯನು ಆರೋಗ್ಯವಾಗಿ ದಿನನಿತ್ಯದ ದೈನಂದಿನ ಕೆಲಸಗಳನ್ನು ಮಾಡಲು ಮಾನಸಿಕ ಆರೋಗ್ಯವೂ ಸಹ ಉತ್ತಮವಾಗಿರಬೇಕು. ಮಾನಸಿಕವಾಗಿ ಸದೃಢವಾಗಿಲ್ಲದಿದ್ದಲ್ಲಿ ಯಾವುದೇ ಕೆಲಸವನ್ನು ಮಾಡಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಮನಸ್ಸು ಸ್ಥೀಮಿತವಾಗಿ ಇರಬೇಕು. ಮಾನಸಿಕ ಆರೋಗ್ಯಕ್ಕಾಗಿ ಮಿತವಾದ ಪೌಷ್ಠಿಕ ಆಹಾರ ಸೇವನೆ, ದಿನನಿತ್ಯ ೮ ಗಂಟೆಗಳ ಕಾಲ ನಿದ್ರೆ ಅಗತ್ಯವಿದೆ. ಎಂತಹ ಒತ್ತಡ ಬಂದರೂ ಮಾನಸಿಕ ಸ್ಥಿರತೆಯನ್ನು ಕಳೆದುಕೊಳ್ಳಬಾರದು. ಕಲೆ, ಕ್ರೀಡೆ ಮನರಂಜನೆ, ಯೋಗ, ವ್ಯಾಯಮದಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಸಮಸ್ಯೆಗಳು ಎದುರಾದಾಗ ಆಪ್ತರೊಂದಿಗೆ ಸಮಾಲೋಚಿಸಿ ಪರಿಹರಿಸಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್. ಚಿದಂಬರ ಅವರು ಮಾತನಾಡಿ ಭಾವನೆಗಳನ್ನು ನಮ್ಮ ಸ್ಥೀಮಿತದಲ್ಲಿ ಇಟ್ಟುಕೊಳ್ಳಬೇಕು. ಉತ್ತಮವಾದ ಆಹಾರ ಸೇವನೆ, ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕು. ಮಾನಸಿಕ ಖಿನ್ನತೆಗೆ ಒಳಗಾದಾಗ ಕುಟುಂಬದವರೊAದಿಗೆ ಚರ್ಚಿಸಿ ಮಾನಸಿಕ ಒತ್ತಡ ಕಡಿಮೆ ಮಾಡಿಕೊಳ್ಳಬೇಕು. ಮಾನಸಿಕ ಆರೋಗ್ಯಕ್ಕಾಗಿ ಮನೋಚೈತನ್ಯ ಕ್ಲಿನಿಕ್ ಸಂಪರ್ಕಿಸಿ ಔಷಧಿ ಸಲಹೆಗಳನ್ನು ಪಡೆದುಕೊಳ್ಳಬೇಕು ಎಂದರು.
ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿAದ ಆರಂಭಗೊAಡ ಜಾಥಾ ಪ್ರಮುಖ ರಸ್ತೆಗಳಲ್ಲಿ ಸಾಗಿ ಜಿಲ್ಲಾಡಳಿತ ಭವನದಲ್ಲಿ ಮುಕ್ತಾಯವಾಯಿತು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ರವಿಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋರೋಗ ತಜ್ಞರಾದ ಡಾ. ಕೆ.ವಿ ಮೇರಿ ಅಂಜಲಾ, ಸಿಮ್ಸ್ ಆಸ್ಪತ್ರೆಯ ಮನೋರೋಗ ತಜ್ಞರಾದ ಡಾ. ಜೆ.ಎನ್. ರಘು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ, ಆರೋಗ್ಯ ನಿರೀಕ್ಷಣಾಧಿಕಾರಿ ಗಿರಿಜಾ ಶಂಕರ್, ಸರ್ಕಾರಿ ನರ್ಸಿಂಗ್ ಶಾಲೆಯ ಪ್ರಾಂಶುಪಾಲರಾದ ಕಮಲ, ಬೋಧಕರಾದ ಸೌಮ್ಯ, ಗಗನ್, ಸುಪ್ರೀತ, ಇತರರು ಇದ್ದರು.