ಬೆಂಗಳೂರು: ಜಲಮಂಡಳಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 2 ವರ್ಷದ ಮಗು ಬಲಿಯಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಜಲಮಂಡಳಿ ಕಾಮಗಾರಿಗೆ ಎಂದು ತೆಗೆದಿದ್ದ ಗುಂಡಿಯಲ್ಲಿ ಬಿದ್ದು ಕಾರ್ತಿಕ್ ಎಂಬ 2 ವರ್ಷದ ಮಗು ಸಾವನ್ನಪ್ಪಿದೆ. ತೆಗೆದಿದ್ದ ಗುಂಡಿ ಮುಚ್ಚದೇ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ ಎಂದು ಮಗುವಿನ ಪೋಷಕರಾದ ತಂದೆ ಹನುಮಾನ್, ತಾಯಿ ಹಂಸ ದಂಪತಿ ಆರೋಪ ಮಾಡಿದ್ದಾರೆ.
ಜಲಮಂಡಳಿ ಇಂಜಿನಿಯರ್, ಕಾಂಟ್ರ್ಯಾಕ್ಟರ್ ವಿರುದ್ಧ ಕೇಸ್ ದಾಖಲಾಗಿದ್ದು ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Review