ಬೆಂಗಳೂರು: ಈ ಭಾರಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವನ್ನು ಅಭ್ಯರ್ಥಿ ಶಾಮನೂರು ಸಮರ್ಥ್ ವ್ಯಕ್ತಪಡಿಸಿದ್ದಾರೆ. ಈಗಾಗಲೇ ನಾಮಪತ್ರ ಸಲ್ಲಿಕೆ ದಿನಾಂಕ ಮುಗಿದಿದ್ದು, ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿರುವ ಸಾದ್ವಿಕ್ ಪೈಲ್ವಾನ್ ಅವರು ತಮ್ಮ ನಾಮಪತ್ರವನ್ನು ಹಿಂಪಡೆಯುವ ಬಗ್ಗೆ ತಮಗೆ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಸಾದ್ವಿಕ್ ಪೈಲ್ವಾನ್ ಹಾಗೂ ತಮ್ಮ ತಂದೆ ಎಸ್.ಎಸ್. ಮಲ್ಲಿಕಾರ್ಜುನ್ ಇಬ್ಬರು ಸಹೋದರರಿದ್ದಂತೆ. ಹಾಗಾಗಿ ಅವರು ನಾಮಪತ್ರ ಹಿಂಪಡೆಯಲಿದ್ದಾರೆ. ನಾಮಪತ್ರ ಹಿಂಪಡೆಯಲು ನಾಳೆ ಕಡೆ ದಿನಾಂಕವಾಗಿದ್ದು, ನಾಳೆ ಸಂಜೆಯೊಳಗೆ ಸ್ಪಷ್ಟ ಚಿತ್ರ ಹೊರಬೀಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.



