ಯಾದಗಿರಿ: ಪತ್ನಿಯ ಶೀಲ ಶಂಕಿಸಿ ಹೆತ್ತತಂದೆಯೇತನ್ನ ಮಕ್ಕಳನ್ನ ಬರ್ಬರವಾಗಿ ಹತ್ಯೆಗೈದಿರುವಘಟನೆಯಾದಗಿರಿತಾಲೂಕಿನ ಹತ್ತಿಕುಣಿಗ್ರಾಮದಲ್ಲಿ ನಡೆದಿದೆ.
ಮಲಗಿದ್ದ ಮಕ್ಕಳ ಮೇಲೆ ಕ್ರೌರ್ಯ ಮೆರೆದರಾಕ್ಷಸತಂದೆ ಶರಣಪ್ಪ. ತಾಯಿ ಬಹಿರ್ದೆಸೆಗೆ ಹೋಗಿದ್ದಾಗ ಮಕ್ಕಳನ್ನ ಕೊಲೆ ಮಾಡಿಎಸ್ಕೇಪ್ಆಗಿದ್ದಾನೆ. ಸಾನ್ವಿ (೫), ಭರತ (೩) ಮೃತದುರ್ದೈವಿ ಮಕ್ಕಳು. ಮತ್ತೋರ್ವ ಮಗನ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಗೆದಾಖಲಿಸಲಾಗಿದೆ.
ಶರಣಪ್ಪನ ಪತ್ನಿ ಕಳೆದ ಕೆಲ ದಿನಗಳಿಂದ ಗಂಡನೊAದಿಗೆ ಹೊಂದಾಣಿಕೆಯಾಗದೇತವರು ಮನೆ ಸೇರಿದ್ದಳು. ಹದಿನೈದು ದಿನಗಳ ಹಿಂದಷ್ಟೇ ಪತ್ನಿಯನ್ನ ಶರಣಪ್ಪಕರೆತಂದಿದ್ದ. ಮಗಳು ಸಾನ್ವಿಜೊತೆ ಹೋಗಿ ಕರೆದುಕೊಂಡು ಬಂದಿದೆ. ಬೆಳಗ್ಗೆ ಹೆಂಡತಿ ಬಹಿರ್ದೆಸೆಗೆ ಹೋಗಿದ್ದಾಗ ಮಲಗಿದ್ದ ಮಕ್ಕಳನ್ನ ಕೊಡಲಿಯಿಂದಕೊಚ್ಚಿ ಹತ್ಯೆ ಮಾಡಿದ್ದಾನೆ. ಒಬ್ಬರು ಮಕ್ಕಳು ಸಾವನ್ನಪ್ಪಿದ್ರೆ, ಮತ್ತೋರ್ವ ಮಗನ ಸ್ಥಿತಿ ಗಂಭೀರವಾಗಿದೆ. ಸ್ಥಳಕ್ಕೆ ಯಾದಗಿರಿ ಡಿವೈಎಸ್ಪಿ ಸುರೇಶ್ ನಾಯಕ್, ಪಿಎಸ್ಐ ಹಣಮಂತ ಬಂಕಲಗಿ ಭೇಟಿ ಪರಿಶೀಲಿಸಿದ್ದಾರೆ.ಯಾದಗಿರಿಗ್ರಾಮೀಣ ಪೊಲೀಸ್ಠಾಣಾ ವ್ಯಾಪ್ತಿಯಲ್ಲಿಘಟನೆ ನಡೆದಿದೆ.