ಧಾರವಾಡ: ನಾಟಕ ಕ್ಷೇತ್ರದಲ್ಲಿ ತಮ್ಮ ಅಪರೂಪದ ಅಭಿನಯದ ಮೂಲಕ ನಾಡಿನ ಜನರ ಹೃದಯ ಗೆದ್ದಿದ್ದ ಖ್ಯಾತ ಹಾಸ್ಯ ನಟ ಹಾಗೂ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಅವರ ಕೊಡುಗೆ ನಾಡಿನ ಕಲಾಕ್ಷೇತ್ರಕ್ಕೆ ಅನನ್ಯವಾದದ್ದು. ಅವರಿಗೆ ಅವರೇ ಸರಿಸಾಟಿ. ಅವರ ಅಕಾಲಿನ ನಿಧನದಿಂದ ಸರ್ವ ಶ್ರೇಷ್ಠ ಹಾಸ್ಯ ನಟನನ್ನು ಕಳೆದುಕೊಂಡು ನಾಡಿನ ಸಾಂಸ್ಕೃತಿಕ ಕ್ಷೇತ್ರ ಬಡವಾಗಿದೆಯೆಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ
ಬಬಲೇಶ್ವರ ಹೇಳಿದರು.
ಕರ್ನಾಟಕ ಬಾಲವಿಕಾಸ ಅಕಾಡೆಮಿ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ದಿ.ರಾಜು ತಾಳಿಕೋಟಿ ಅವರ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ, ಅವರು ಮಾತನಾಡಿದರು.ರಾಜು ತಾಳಿಕೋಟಿ ವೃತ್ತಿ ರಂಗಭೂಮಿಯನ್ನು ಚಲನಚಿತ್ರ ಕ್ಷೇತ್ರಕ್ಕೆ ಕೊಂಡಿಯಾಗಿ ಬೆಸೆದಿದ್ದರು. ಉತ್ತರ ಕರ್ನಾಟಕದ ಕನ್ನಡ ಭಾಷೆಗೆ ಎಲ್ಲೆಡೆ ಮನ್ನಣೆ ಸಿಗುವಂತೆ ಮಾಡಿದ್ದರು. ಅವರ ಅಗಲಿಕೆ ರಂಗಭೂಮಿಗೆ, ಉತ್ತರ ಕರ್ನಾಟಕದ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದರು.ರಾಜು ತಾಳಿಕೋಟಿ ಅವರ ಇಡೀ ಕುಟುಂಬ ರಂಗಭೂಮಿಗೆ ಬಲ ತುಂಬಿದೆ.
ಅವರ ಕೊಡೆಗೆ ಅಪಾರವಾಗಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಅಧಿಕಾರಿಗಳಾದ ಅನ್ನಪೂರ್ಣ ಸಂಗಳದ, ಪುಷ್ಪಾ ಹಂಜಗಿ, ಸುಭಾಸ ಚಂದ್ರಗಿರಿ, ಸವರ್ಣಲತಾ ಮಠದ, ಪದ್ಮಶ್ರೀ ಮೇಟಿ, ಅರ್ಪಿತಾ, ಶಿವಕುಮಾರ ಸ್ಟಾಯ ನ್ಲಿಲೂಥರ, ಅಶೋಕ ಇತರರು ಉಪಸ್ಥಿತರಿದ್ದರು