ಚಿಕ್ಕಬಳ್ಳಾಪುರ: ಜಿಲ್ಲೆಯ ಆರ್. ಚೊಕ್ಕನಹಳ್ಳಿ ಗ್ರಾಮದಲ್ಲಿ ವರಲಕ್ಷ್ಮೀ(೨೫) ಎಂಬ ಯುವತಿಯ ಅನುಮಾನಾಸ್ಪದ ಸಾವು ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಪ್ರೇಮಿಗಳ ನಡುವೆ ಮಧ್ಯಸ್ಥಿಕೆ ವಹಿಸಬೇಡಿ ಎಂದು ಗಂಡ ಗಂಗರಾಜು ಬುದ್ದಿವಾದ ಹೇಳಿದ ಹಿನ್ನೆಲೆ ಗಂಡ-ಹೆAಡತಿಯ ನಡುವೆ ಗಲಾಟೆ ನಡೆದಿದ್ದಾಗಿ ತಿಳಿದುಬಂದಿದೆ.
ವರಲಕ್ಷ್ಮೀ ಸ್ನೇಹಿತೆ ಶ್ರಾವಣಿಯ ಪ್ರಿಯಕರ ವರಲಕ್ಷಿ÷್ಮಗೆ ಕರೆ ಮಾಡಿದ್ದು, ಅದನ್ನು ಗಂಗರಾಜು ಸ್ವೀಕರಿಸಿದ್ದರಿಂದ ಜಗಳ ಉಂಟಾಗಿತ್ತು ಎನ್ನಲಾಗಿದೆ. ನಂತರ ವರಲಕ್ಷಿ÷್ಮ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪತ್ನಿಯನ್ನು ಹೊಡೆದು ಬಳಿಕ ನೇಣು ಹಾಕಿದ್ದಾರೆ ಎಂದು ಮೃತಳ ತವರು ಮನೆಯವರು ಗಂಗರಾಜು ಹಾಗೂ ಅವನ ತಂದೆ-ತಾಯಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಇದೇ ವೇಳೆ ಶವವನ್ನು ಸಕಾಲಕ್ಕೆ ತೋರಿಸಲಿಲ್ಲ ಎಂದು ಆರೋಪಿಸಿ ಪೆರೇಸಂದ್ರ ಪೊಲೀಸರು ಹಾಗೂ ಗುಡಿಬಂಡೆ ತಾಲೂಕು ಆಸ್ಪತ್ರೆ ವಿರುದ್ಧ ಮೃತಳ ಸಂಬAಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



