ಕುಣಿಗಲ್: ನಿನ್ನೆ ಸಂಜೆ ಆಟೋ ಹಾಗೂ ತುಕಾಲಿ ಸಂತೋಷ್ ಕಾರಿನ ಮಧ್ಯೆ ಅಪಘಾತ ಸಂಭವಿಸಿತ್ತು. ತೀವ್ರವಾಗಿ ಗಾಯಗೊಂಡ ಆಟೋ ಚಾಲಕ ಜಗದೀಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.
ತುಕಾಲಿ ಸಂತೋಷ್ ಅವರು ಹೊಳೆನರಸೀಪುರದವರು. ಅವರು ತಮ್ಮ ಕಾರಿನಲ್ಲಿ ತುಮಕೂರು ಕಡೆಯಿಂದ ಕುಣಿಗಲ್ ಮಾರ್ಗವಾಗಿ ಹೊಳೆನರಸೀಪುರ ಕಡೆ ಹೋಗುತ್ತಿದ್ದರು. ಅದೇ ವೇಳೆ ಕುಣಿಗಲ್ನಿಂದ ಕುರುಡಿಹಳ್ಳಿಗೆ ಆಟೋ ತೆರಳುತ್ತಿತ್ತು. ತುಕಾಲಿ ಸಂತೋಷ್ ಕಾರಿನ ಬಲ ಭಾಗಕ್ಕೆ ಆಟೋ ಡಿಕ್ಕಿ ಹೊಡೆದಿದೆ.
ಆಟೋ ಬಹುತೇಕ ನಜ್ಜುಗುಜ್ಜಾಗಿತ್ತು. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಅಪಘಾತ ನಡೆದಿದೆ.
ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಅವರನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಜಗದೀಶ್ ಅವರಿಗೆ 40 ವರ್ಷ ವಯಸ್ಸಾಗಿತ್ತು.