This is the title of the web page
This is the title of the web page

ಬೇಲೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರಿಗೆ ಟಿಕೆಟ್ ದೊರಕಿದರು ಅವರ ಗೆಲುವಿಗೆ ಶ್ರಮಿಸಬೇಕು ಇಲ್ಲಿ ವ್ಯಕ್ತಿ ಮುಖ್ಯ ಅಲ್ಲ ಪಕ್ಷ ಮುಖ್ಯ: ಡಿಕೆಶಿ

ಬೇಲೂರು: ಈ ಬಾರಿ ಬೇಲೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರಿಗೆ ಟಿಕೆಟ್ ದೊರಕಿದರು ಅವರ ಗೆಲುವಿಗೆ ಶ್ರಮಿಸಬೇಕು. ಇಲ್ಲಿ ವ್ಯಕ್ತಿ ಮುಖ್ಯ ಅಲ್ಲ ಪಕ್ಷ ಮುಖ್ಯ ಎಂದು ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.

ಪಟ್ಟಣದ ಸರ್ಕಾರಿ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ. ಪ್ರಜಾದ್ವನಿ ಯಾತ್ರೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ನಾಯಕರು ಎಂದೆಂದಿಗೂ ಅನ್ನ ಕೊಟ್ಟ ರೈತ. ವಿದ್ಯೆ ಕೊಟ್ಟ ಗುರುಗಳ ಋಣವಾಗಿರಬೇಕು ಎಂಬ ರೀತಿಯಲ್ಲಿ ಈ ಬಾರಿ ಈ ಕ್ಷೇತ್ರದ ಚುನಾವಣೆಯಲ್ಲಿ ನಾವೆಲ್ಲ ಒಗ್ಗಟ್ಟಿನಿಂದ ಹೋರಾಡಬೇಕಿದೆ ಮಾಜಿ ಸಚಿವ ಬಿ ಶಿವರಾಂ ನನ್ನ ಕೊನೆ ಚುನಾವಣೆ ಒಂದು ಅವಕಾಶ ಕಲ್ಪಿಸಿಕೊಡಿ ಎಂದು ಕೇಳಿದ್ದಾರೆ. ಉಳಿದಂತ ಆಕಾಂಕ್ಷಿಗಳಾದ ರಾಜಶೇಖರ್. ಕೀರ್ತನ ರುದ್ರೇಶ್ ಗೌಡ. ವೈ ಎನ್ ಕೃಷ್ಣೆಗೌಡ. ಲಕ್ಷ್ಮಣ್ ಎಲ್ಲಾ ಸೇರಿದಂತೆ ಒಗ್ಗಟ್ಟಿನಿಂದ ಬಲವಿದೆ ಎಂಬುದನ್ನು ತೋರಿಸಬೇಕಾಗಿದೆ.ಎಂದು ಕಾಂಗ್ರೆಸ್ ಪಕ್ಷದಿಂದ ಈ ಕ್ಷೇತ್ರದ ಅಭ್ಯರ್ಥಿ ಬಿ ಶಿವರಾಂ ಹೆಸರು ಸೂಚಿಸುವಂತಾಗಿತ್ತು.ಈ ಬಾರಿ ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಯಾರು ಬೇಸರಗೊಳ್ಳಬೇಡಿ ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬರಿಗೂ ಅಧಿಕಾರ ಕಲ್ಪಿಸುವ ನಿರ್ಧಾರ ಕೈಗೊಳ್ಳುತ್ತದೆ.

ಎಂದು ಎಲ್ಲಾ ಆಕಾಂಕ್ಷೆಗಳನ್ನು ಕರೆದು ಕೈ ಎತ್ತುವ ಮೂಲಕ ವಿಜಯ ಸಂಕೇತ ನೀಡಿ. ಮಾತನಾಡಿ ಡಾ ಬಿ ಆರ್ ಅಂಬೇಡ್ಕರ್ ಬರೆದಿರುವ ಸಂವಿಧಾನಕ್ಕೆ ಬದ್ಧವಾಗಿ ಜನಪರ ಕಾರ್ಯಕ್ರಮಗಳನ್ನು ರೂಪಿಸಿ ದೇಶದ ಎಲ್ಲಾ ಜಾತಿ ಧರ್ಮದ ಒಳಿತಿಗಾಗಿ ಶ್ರಮಿಸಿದ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷ . ಸಂವಿಧಾನಕ್ಕೆ ವಿರುದ್ಧವಾಗಿ ರಾಜ್ಯ ಮತ್ತು ದೇಶದಲ್ಲಿ ಡಬಲ್ ಇಂಜಿನ್ 40/ ಸರ್ಕಾರ ರಾಜ್ಯದ ಜನರಿಗೆ ಬೆಲೆ ಏರಿಕೆಯ ಒಡೆತನ ನೀಡಿರುವ ಬಿಜೆಪಿ ಸರ್ಕಾರವನ್ನು ಈ ಬಾರಿಯ ಚುನಾವಣೆಯಲ್ಲಿ ಕಿತ್ತೊಗೆಯಬೇಕು .ಚುನಾವಣೆ ಹತ್ತಿರ ಬಂದಾಗ ಈ ರಾಜ್ಯಕ್ಕೆ ಪದೇಪದೇ ಈ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಮತ್ತು ನಡ್ದ ಬಂದು ಹೋಗುತ್ತಿದ್ದಾರೆ . ಆದರೆ ಕೋವಿಡ್ ಹಾಗೂ ಪ್ರವಾಹ ಬಂದಾಗ ರಾಜ್ಯದ ಕಡೆ ತಿರುಗಿ ನೋಡಲಿಲ್ಲ.

ಉತ್ತರ ಕರ್ನಾಟಕ ಮತ್ತು ಕೊಡಗಿನಲ್ಲಿ ನಡೆದ ಪ್ರವಾಹಕ್ಕೆ ಸಾವಿರಾರು ಜನರ ಆಸ್ತಿ ಮನೆ ಕಳೆದುಕೊಂಡಿದ್ದರೂ ಸಮಸ್ಯೆಗೆ ಸ್ಪಂದಿಸಲಿಲ್ಲ. ಆದರೆ ಈಗ ತಿಂಗಳಿಗೆ ನಾಲ್ಕೈದು ಬಾರಿ ಬಂದು ಹೋಗುತ್ತಾರೆ ಎಂದು ವ್ಯಂಗ್ಯವಾಡಿದರು. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ನಾವು ಈಗಾಗಲೇ ನುಡಿದಂತೆ ಬಿಪಿಎಲ್ ಕಾರ್ಡುದಾರರಿಗೆ 10 ಕೆಜಿ ಅಕ್ಕಿ.200 ಯೂನಿಟ್ ವಿದ್ಯುತ್ ಉಚಿತ.

ಪ್ರತಿ ಕುಟುಂಬಕ್ಕೆ ತಿಂಗಳಿಗೆ 2000 ಸಾವಿರರಂತೆ ವರ್ಷಕ್ಕೆ 24, ಸಾವಿರ ಕೊಡುವ ನಿಟ್ಟಿನಲ್ಲಿ ಈಗಲೇ ಬೂತ್ ಮಟ್ಟದಿಂದ ಗ್ಯಾರಂಟಿ ಕಾರ್ಡ್ ನೀಡುತ್ತೇವೆ. ಎಂದು ಶಾಸಕ ದಿ. ವೈ.ಎನ್ ರುದ್ರೇಶ್ ಗೌಡರು ಎರಡು ಬಾರಿ ಶಾಸಕರಾಗಿ ಈ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಬಿಜೆಪಿ ಆಪರೇಷನ್ ಕಮಲ ಮಾಡಿ ರುದ್ರೇಶ್ ಗೌಡರನ್ನು ಸೆಳೆಯಲು ಪ್ರಯತ್ನಿಸಿದಾಗ ಪಕ್ಷನಿಷ್ಠ ಮೆರೆದು ಕೊಡುಗೈ ದಾನಿಯಾಗಿ ಉಳಿದರು ಎಂದು ಶ್ಲಾಘಿಸಿದರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗಲೆಲ್ಲ ಜನಪರವಾದ ಯೋಜನೆಗಳನ್ನು ಜಾರಿಗೆ ತಂದು ಜನ ಮೆಚ್ಚುಗೆ ಪಡೆದಿದೆ.

ಆದರೆ ಈಗಿನ ಬಿಜೆಪಿ 40/ ಸರ್ಕಾರಕ್ಕೆ ಭ್ರಷ್ಟಾಚಾರದಿಂದ ಹಣ ಮಾಡುವುದೇ ಏಕೈಕ ಗುರಿಯಾಗಿದೆ. ಪಿ ಎಸ ಐ ನೇಮಕಾತಿ ಕೋಟ್ಯಾಂತರ ಹಣ ಅವ್ಯವಹಾರ ನಡೆದಿದ್ದು 50. ಸಾವಿರ ಉದ್ಯೋಗ ಆಕಾಂಕ್ಷಿಗಳಿಗೆ ಅನ್ಯಾಯ ಮಾಡಿದ್ದಾರೆ. ಸಾವಿರಾರು ಯುವಕರಿಗೆ ಉದ್ಯೋಗ ನೀಡುವುದಾಗಿ ಬಿಜೆಪಿ ಸರ್ಕಾರ ಭರವಸೆ ನೀಡಿತ್ತು ಯಾರಿಗಾದರೂ ಒಬ್ಬನಿಗೆ ಉದ್ಯೋಗ ಸಿಕ್ಕಿದೆಯಾ ತೋರಿಸಲಿ . ವಿದೇಶದಿಂದ ಕಪ್ಪು ಹಣ ತಂದು ಖಾತೆಗೆ ರಾಜ್ಯದ ಪ್ರತಿಯೊಬ್ಬ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದಿದ್ದರು. ಯಾರಿಗಾದರೂ ಅಚ್ಚೆ ದಿನ ಬಂತಾ ಎಂದು ಪ್ರಶ್ನೆ ಮಾಡಿದರು.

ಕಾಂಗ್ರೆಸ್ ಕಾರ್ಯ ಅಧ್ಯಕ್ಷ ಧ್ರುವನಾರಾಯಣ್ ಮಾತನಾಡಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಸಂವಿಧಾನದ ಆಶಯದಂತೆ ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದೆ. ಈ ಬಾರಿ ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸಿದ್ದು ಈ ಕ್ಷೇತ್ರದ ಅಭಿವೃದ್ಧಿಗಾಗಿ ,ಜನ ಸಾಮಾನ್ಯರು ನೆಮ್ಮದಿಯಿಂದ ಜೀವನ ನಡೆಸಲು ಕಾಂಗ್ರೆಸ್ ಗೆ ಅವಕಾಶ ಮಾಡಿಕೊಡಬೇಕು ಸಂವಿಧಾನ ವಿರೋಧಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷವನ್ನು ಈ ಬಾರಿ ಅಧಿಕಾರಕ್ಕೆ ತರಲು ಮತದಾರರು ಮುಂದಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸಂಸದ ಡಿ ಕೆ ಸುರೇಶ್, ಚಂದ್ರಶೇಖರ್, ಮಾಜಿ ಸಚಿವರಾದ ಬಿ. ಶಿವರಾಂ, ಎಚ್‍ಎಂ ರೇವಣ್ಣ. ಕೆಪಿಸಿಸಿ ಸದಸ್ಯ ಮೋಹನ್, ಜಿಲ್ಲಾಧ್ಯಕ್ಷ ಈ ಎಚ್ ಲಕ್ಷ್ಮಣ್, ಮಾಜಿ ಜಿ.ಪಂ ಸದಸ್ಯ ವೈ.ಎನ್ ಕೃಷ್ಣೇಗೌಡರು, ಗ್ರಾನೈಟ್ ರಾಜಶೇಖರ್, ಮಾತನಾಡಿದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂಜೆ ನಿಶಾಂತ್, ಕೀರ್ತನಾ ರುದ್ರೇಶ್ ಗೌಡ, ಹೆಚ್ ಕೆ ಜವರೇಗೌಡ, ಸಪಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ ಆರ್ ವೆಂಕಟೇಶ್, ಪುರಸಭೆ ಅಧ್ಯಕ್ಷ ತೀರ್ಥ ಕುಮಾರಿ ವೆಂಕಟೇಶ್, ಉಪಾಧ್ಯಕ್ಷೆ ಉಷಾ ಸತೀಶ್, ಶಾಂತಕುಮಾರ್.

ಮಾಜಿ ಜಿ.ಪಂ ಸದಸ್ಯ ತೌಫಿಕ್, ಕೆಪಿಸಿಸಿ ಮಾಜಿ ಸದಸ್ಯ ಬಿಎಲ್ ಧರ್ಮೇಗೌಡ, ಯುವ ಘಟಕ ಅಧ್ಯಕ್ಷ ಅಶೋಕ್, ಪುರಸಭೆ ಸದಸ್ಯರಾದ.ಭರತ್. ಅಕ್ರಂಪಾಶ. ಜಮಾಲುದ್ದೀನ್. ಫಯಾಜ್, ತಾರಾ ಚಂದನ್, ಅಬ್ದುಲ್ ಸಮದ್, ಲಿಂಗೇಶ್ ಸತ್ಯನಾರಾಯಣ್ ಕೋಳಿ ಶಿವು. ಚಂದ್ರಶೇಖರ್, ರಂಗನಾಥ್, ಗೋಪಿನಾಥ್, ದೇವರಾಜ್, ಎಸ್ ಜಿ ಪ್ರಸನ್ನ. ಸಲೀಂ, ಮಂಜುನಾಥ್, ಜಾಕೀರ್. ದಾಸಪ್ಪ. ಇಕ್ಬಾಲ್. ಸೇರಿದಂತೆ ಇತರರು ಹಾಜರಿದ್ದರು.