ನವದೆಹಲಿ : ಇತ್ತೀಚೆಗೆ, ಭಾರತೀಯ ಮಹಿಳಾ ಕ್ರಿಕೆಟ್ ತಂಡ ಟಿ೨೦ ವಿಶ್ವಕಪ್ ಗೆದ್ದಿತ್ತು. ಈಗ ಭಾರತೀಯ ವನಿತೆಯರ ಕಬಡ್ಡಿ ತಂಡದ ಸಮಯ.. ಭಾರತದ ಮಹಿಳಾ ಕಬಡ್ಡಿ ತಂಡ,
೨೦೨೫ರ ಕಬಡ್ಡಿ ವಿಶ್ವಕಪ್ ಗೆದ್ದುಕೊಂಡಿದೆ. ಈ ಅದ್ಭುತ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಢಾಕಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತವು ಚೈನೀಸ್ ತೈಪೆಯನ್ನು ೩೫-೨೮ ಅಂತರದಿಂದ ಸೋಲಿಸಿ, ಸತತ ಎರಡನೇ ಬಾರಿಗೆ ಮಹಿಳಾ ಕಬಡ್ಡಿವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಇಡೀ ಟೂರ್ನಿಯಲ್ಲಿ ಭಾರತ ತಂಡವು ಒಂದೇ ಒಂದು ಪಂದ್ಯವನ್ನೂ ಸೋತಿಲ್ಲ. ಪಂದ್ಯದ ಆರಂಭದಲ್ಲಿ ಭಾರತ ತಂಡವು ಬಲಿಷ್ಠ ರಕ್ಷಣಾ ವಿಭಾಗ ಮತ್ತು ಚುರುಕಾದ ದಾಳಿಯೊಂದಿಗೆ ಉತ್ತಮ ಪ್ರದರ್ಶನ ನೀಡಿ, ಮೊದಲಾರ್ಧದಲ್ಲಿ ಸಣ್ಣ ಅಂತರದ ಮುನ್ನಡೆ ಸಾಧಿಸಿತು. ದ್ವಿತೀಯಾರ್ಧದಲ್ಲಿ ತಂಡವು ಇನ್ನಷ್ಟು ಆಕ್ರಮಣಕಾರಿ ಆಟಕ್ಕೆ ಮೊರೆಹೋಗಿ, ಚೈನೀಸ್ ತೈಪೆಗೆ ತಿರುಗಿಬರಲು ಯಾವುದೇ ಅವಕಾಶ ನೀಡಲಿಲ್ಲ. ಇದಕ್ಕೂ ಮೊದಲು, ಭಾರತ ತಂಡವು ತನ್ನ ಗುಂಪಿನ ಎಲ್ಲಾ ಪಂದ್ಯಗಳನ್ನು ಗೆದ್ದಿತ್ತು. ನಂತರ ಸೆಮಿಫೈನಲ್ನಲ್ಲಿ ಇರಾನ್ ತಂಡವನ್ನು ೩೩-೨೧ ಅಂತರದಿಂದ ಸೋಲಿಸಿ ಫೈನಲ್ಗೆ ಪ್ರವೇಶಿಸಿತ್ತು. ಇತ್ತ, ಚೈನೀಸ್ ತೈಪೆಯೂ ತನ್ನ ಗುಂಪಿನಲ್ಲಿ ಅಜೇಯವಾಗಿ ಉಳಿದಿತ್ತು ಮತ್ತು ಸೆಮಿಫೈನಲ್ನಲ್ಲಿ ಬಾಂಗ್ಲಾದೇಶವನ್ನು ೨೫-೧೮ ಅಂತರದಿಂದ ಮಣಿಸಿತ್ತು.
ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ಈ ಗೆಲುವು ದೇಶಕ್ಕೆ ಹೆಮ್ಮೆ ತಂದಿದೆ ಎಂದು ಅವರು ಹೇಳಿದ್ದಾರೆ. ತಂಡವು ಅತ್ಯುತ್ತಮ ಧೈರ್ಯ, ಕೌಶಲ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದೆ
ಎಂದು ಮೋದಿ ಶ್ಲಾಘಿಸಿದ್ದಾರೆ. ಈ ವಿಜಯವು ಅನೇಕ ಯುವಕರಿಗೆ ಕಬಡ್ಡಿ ಆಡಲು, ದೊಡ್ಡ ಕನಸು ಕಾಣಲು ಮತ್ತು ಉನ್ನತ ಗುರಿಗಳನ್ನು ತಲುಪಲು ಸ್ಫೂರ್ತಿ ನೀಡುತ್ತದೆ ಎಂದು ಅವರು
ಟ್ವಿಟ್ಟರ್ನಲ್ಲಿ ಬರೆದುಕೊಂಡಿದ್ದಾರೆ. “೨೦೨೫ ರ ಕಬಡ್ಡಿ ವಿಶ್ವಕಪ್ ಗೆಲ್ಲುವ ಮೂಲಕ ದೇಶ ಹೆಮ್ಮೆಪಡುವಂತೆ ಮಾಡಿದ್ದಕ್ಕಾಗಿ ನಮ್ಮ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ ಅಭಿನಂದನೆಗಳು! ಅವರು ಅತ್ಯುತ್ತಮ ಧೈರ್ಯ, ಕೌಶಲ್ಯ ಮತ್ತು ಸಮರ್ಪಣೆಯನ್ನು ಪ್ರದರ್ಶಿಸಿದ್ದಾರೆ. ಅವರ ಗೆಲುವು ಅಸಂಖ್ಯಾತ ಯುವಕರಿಗೆ ಕಬಡ್ಡಿಯನ್ನು ಮುಂದುವರಿಸಲು, ದೊಡ್ಡ ಕನಸು ಕಾಣಲು ಮತ್ತು ಉನ್ನತ ಗುರಿಯನ್ನು ಸಾಧಿಸಲು ಸ್ಫೂರ್ತಿ ನೀಡುತ್ತದೆ” ಎಂದು ಪ್ರಧಾನಿ ಮೋದಿ ಅವರು ಎಕ್ಸ್ ಜಾಲತಾಣದಲ್ಲಿ ಬರೆದಿದ್ದಾರೆ.
ಪ್ರೊ ಕಬಡ್ಡಿ ಲೀಗ್ (ಪಿಕೆಎಲ್) ನ ಅಧಿಕೃತ ಪ್ರಸಾರಕರಾದ ಸ್ಟಾರ್ ಸ್ಪೋರ್ಟ್ಸ್ , ಪಿಕೆಎಲ್ ಸೀಸನ್ ೧೧ರ ಜಾಹೀರಾತನ್ನು ಪ್ರಸಾರ ಮಾಡಲುಆರಂಭಿಸಿದ್ದು, ಇದರಲ್ಲಿ ಕನ್ನಡದ ಸೂಪರ್ಸ್ಟಾರ್ ಕಿಚ್ಚ ಸುದೀಪ್ ಅವರು ಕಾಣಿಸಿಕೊಂಡಿದ್ದಾರೆ. ತಮ್ಮ ಅತ್ಯಾಕರ್ಷಕ ಉಪಸ್ಥಿತಿ ಮತ್ತು ಅದ್ಭುತ ನಟನಾ ಚಾತುರ್ಯಕ್ಕೆ ಹೆಸರಾಗಿರುವ ಸುದೀಪ್ ಅವರು, ಈ ಜಾಹೀರಾತಿನ ಮೂಲಕ ಪಿಕೆಎಲ್ನಜನಪ್ರಿಯ ಮತ್ತು ಅತ್ಯುತ್ತಮ ತಂಡಗಳಲ್ಲಿ ಒಂದಾಗಿರುವ ಬೆಂಗಳೂರು ಬುಲ್ಸ್ ತಂಡದ ಶಕ್ತಿ, ದೃಢತೆ ಹಾಗೂ ತಂಡದ ಸಾಮರ್ಥ್ಯವನ್ನು ಉತ್ಸಾಹಭರಿತವಾಗಿ ಪ್ರೇಕ್ಷಕರಿಗೆ ತಲುಪಿಸಿದ್ದಾರೆ.



