ವಿಜಯಪುರ: ಉತ್ತರ ಕರ್ನಾಟಕದಲ್ಲಿ ಭೀಮಾನದಿ ಉಕ್ಕಿಹರಿದ ಪರಿಣಾಮ ಉಂಟಾದ ಭೀಕರ ಪ್ರವಾಹ ಪರಿಸ್ಥಿತಿ ಕುರಿತು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಪ್ರವಾಹ ಪರಿಹಾರದ ವಿಚಾರದಲ್ಲಿ ಮಧ್ಯಪ್ರವೇಶಿಸಿ ಉತ್ತರ ಕರ್ನಾಟಕ ಜನತೆಗೆ ನೆರವಾಗಬೇಕೆಂದು ಮನವಿ ಮಾಡಿದ್ದಾರೆ. ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಭೀಮಾನದಿಯ ಉಕ್ಕಿ ಹರಿದ ಪರಿಣಾಮ ೧೧೭ ಗ್ರಾಮಗಳು ಜಲಾವೃತಗೊಂಡಿದ್ದು, ೧೦ ಸಾವಿರಕ್ಕೂ ಹೆಚ್ಚು ಮಂದಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ೫೪೭ ಮನೆಗಳು ಸಂಪೂರ್ಣ ಹಾನಿಗೊಳಗಾಗಿದ್ದು, ಸಾವಿರಾರು ಜನರು ಆಶ್ರಯ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಭೀಮಾ ನದಿ ತೀರ ಪ್ರದೇಶಗಳಲ್ಲಿ ಉಂಟಾದ ಭಾರಿ ಪ್ರವಾಹವು ೧೦ ಲಕ್ಷ ಹೆಕ್ಟೇರ್ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಕಾರಣವಾಗಿದೆ. ರೈತರು ತಮ್ಮ ಬೆಳೆಗಳು ಮತ್ತು ಜೀವನೋಪಾಯವನ್ನು ಕಳೆದುಕೊಂಡಿದ್ದಾರೆ. ಮಹಾರಾಷ್ಟçದ ಮೇಲ್ಭಾಗದ ಜಲಾಶಯಗಳು ಮತ್ತು ಬ್ಯಾರೇಜ್ಗಳಿಂದ ಹೆಚ್ಚಿನ ಪ್ರಮಾಣದ ನೀರನ್ನು ಬಿಡುಗಡೆ ಮಾಡುವುದರಿಂದ ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ಬೀದರ್ ಜಿಲ್ಲೆಗಳಲ್ಲಿ ವಿಶಾಲವಾದ ಭೂಮಿ ಮುಳುಗಿದೆ, ಆದರೆ ಭೀಮಾ
ಮತ್ತು ಮಾಂಜ್ರಾ ನದಿಗಳ ಉಬ್ಬರವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಯತ್ನಾಳ್ ಉಲ್ಲೇಖಿಸಿದ್ದಾರೆ.
ಸಾವಿರಾರು ಕುಟುಂಬಗಳು ಆಶ್ರಯ, ಆಹಾರ ಅಥವಾ ಮೂಲ ಸೌಕರ್ಯಗಳಿಲ್ಲದೆ ಕಷ್ಟಪಡುತ್ತಿವೆ. ಕಟ್ಟಿಸಂಗಾವಿ ಬಳಿ ಸೇತುವೆ ನೀರಿನಲ್ಲಿ ಮುಳುಗಿರುವುದರಿಂದ ರಾಷ್ಟಿçÃಯ ಹೆದ್ದಾರಿ ೫೦ ರಲ್ಲಿ ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ಸಂಪರ್ಕ ಕಡಿತಗೊಂಡಿದೆ ಮತ್ತು ಪರಿಹಾರ ಕಾರ್ಯಾಚರಣೆಗಳು ವಿಳಂಬವಾಗಿವೆ. ಸಿಲುಕಿಕೊAಡಿರುವ ಜನರನ್ನು ರಕ್ಷಿಸಲು ಮತ್ತು ತಕ್ಷಣದ ಸಹಾಯವನ್ನು ಒದಗಿಸಲು ಓಆಖಈ ಮತ್ತು Sಆಖಈ ತಂಡಗಳು ಅವಿಶ್ರಾಂತವಾಗಿನ ಕೆಲಸ ಮಾಡುತ್ತಿವೆ. ಆದರೂ ಹಾನಿಯ ಪ್ರಮಾಣ ಗಂಭೀರವಾಗಿರುವುದರಿAದ ಕೇಂದ್ರ ಸರ್ಕಾರದಿAದ ತುರ್ತು ನೆರವಿನ ಅಗತ್ಯ ಇದೆ ಎಂದು ಯತ್ನಾಳ್ ಮನವಿ ಮಾಡಿದ್ದಾರೆ.
ಪ್ರವಾಹ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಪರಿಹಾರ ಕ್ರಮ ಕೈಗೊಳ್ಳುವುದಕ್ಕಿಂತಲೂ ಹೆಚ್ಚು ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಂಡಿದೆ ಎಂದು ಮಪತ್ರದಲ್ಲಿ ಯತ್ನಾಳ್ ಆರೋಪಿಸಿದ್ದಾರೆ. ತುರ್ತು ಪರಿಹಾರ ಕ್ರಮ ಕೈಗೊಳ್ಳಲು ಮತ್ತು ಕೇಂದ್ರದ ವಿಶೇಷ ತಂಡವನ್ನು ಉತ್ತರ ಕರ್ನಾಟಕಕ್ಕೆ ಕಳುಹಿಸಲು ಯತ್ನಾಳ ಪ್ರಧಾನಿಗೆ ಯತ್ನಾಳ್ ಮನವಿ ಮಾಡಿದ್ದಾರೆ. ಅಲ್ಲದೆ, ಪ್ರವಾಹ ಪೀಡಿತ ಕುಟುಂಬಗಳು, ರೈತರು ಮತ್ತು ಗ್ರಾಮಗಳ
ಪುನರ್ನಿರ್ಮಾಣಕ್ಕಾಗಿ ತಕ್ಷಣದ ಹಣಕಾಸು ನೆರವನ್ನು ಎನ್ಡಿಆರ್ಎಫ್ನಿಂದ ಬಿಡುಗಡೆ ಮಾಡಲು ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದಾರೆ.